ಸುಳ್ಯ: ಮಾನವ ಇಂದು ಸ್ವಾರ್ಥಕ್ಕಾಗಿ ಪ್ರಕೃತಿಯ ಅಸ್ತಿತ್ವಕ್ಕೆ ಧಕ್ಕೆ ಉಂಟುಮಾಡುತ್ತಿದ್ದಾನೆ. ಒಂದು ಮಿತಿಯವರೆಗೆ ಪ್ರಕೃತಿ ಮಾತೆ ತನ್ನ ಮೇಲಿನ ದೌರ್ಜನ್ಯಗಳನ್ನು ಸಹಿಸಿಕೊಳ್ಳುತ್ತಾಳೆ. ಮೇರೆ ಮಿರಿದಂತೆ ವಿಕೃತ ರೂಪ ತೋರುತ್ತಾಳೆ ಎಂದು ಸುಳ್ಯ ಎನ್ನೆಂಸಿಯ ರಸಾಯನಶಾಸ್ತ್ರ ಉಪನ್ಯಾಸಕಿ ಪ್ರಣಿತ ಬೆಳ್ಳೂರು ಹೇಳಿದರು
ಅವರು ನೆಹರು ಮೆಮೋರಿಯಲ್ ಪ.ಪೂ.ಕಾಲೇಜು ಸುಳ್ಯ ಇದರ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಮರಗಳು ಹೀಗೆ ನಶಿಸುತ್ತಾ ಹೋದರೆ ಭವಿಷ್ಯದಲ್ಲಿ ಮುಂದೊಂದು ದಿನ ಆಕ್ಸಿಜನ್ ಸಿಲಿಂಡರ್ ಗಳನ್ನು ನೇತು ಹಾಕಿಕೊಂಡು ಜೀವನ ಸಾಗಿಸಬೇಕಾದ ದೌರ್ಭಾಗ್ಯ ನಮ್ಮದಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.
ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಇವರು ಸಭಾದ್ಯಕ್ಷತೆ ವಹಿಸಿ ಪರಿಸರ ಕಾಳಜಿಯನ್ನು ಎಲ್ಲರೂ ವಹಿಸಬೇಕೆಂದು ಕರೆ ನೀಡಿದರು.
ವೇದಿಕೆಯಲ್ಲಿ ವಿ.ಕ್ಷೇಮಾಧಿಕಾರಿ ಲಕ್ಷ್ಮಣ್ ಏನೇಕಲ್ ,ಕಾರ್ಯಕ್ರಮ ಸಂಯೋಜಕರಾದ ದಾಮೋದರ ಪಿ ,ರತ್ನಾವತಿ ಬಿ, ಕು.ವಿನುತ ಕೆ.ಎನ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪ್ರದ್ಯುಮ್ನ,ಶ್ರೀಶ ನಾರಾಯಣ ಎ ಪರಿಸರ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಾದ ರಾಜಿತ ಪ್ರಾರ್ಥಿಸಿದರು, ನವ್ಯಕೃಷ್ಣ ಕೆ.ಎಸ್ ಸ್ವಾಗತಿಸಿ, ಅನಘ ಆರ್ ಯು,ನಂದಿತ ಎಂ.ವಿ,ಚರೀಷ್ಮ ಡಿ.ಎಸ್,ಅಕ್ಷತ ಎಸ್ ಪರಿಸರ ಗೀತೆ ಹಾಡಿದರು. ಪೃಥ್ವಿಶ್ರೀ ಕೆ ಅತಿಥಿಗಳನ್ನು ಪರಿಚಯಿಸಿದರು. ಕೌಶಿಕ್ ಕುರುಂಜಿ ವಂದಿಸಿದರು. ಜ್ಞಾನೇಶ್ ಕೆ.ಜೆ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಭಾಷಣ, ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಪ್ರಾಂಶುಪಾಲರು ಬಹುಮಾನ ವಿತರಿಸಿದರು.
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…
ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…