ಸುಳ್ಯ: ಮಾನವ ಇಂದು ಸ್ವಾರ್ಥಕ್ಕಾಗಿ ಪ್ರಕೃತಿಯ ಅಸ್ತಿತ್ವಕ್ಕೆ ಧಕ್ಕೆ ಉಂಟುಮಾಡುತ್ತಿದ್ದಾನೆ. ಒಂದು ಮಿತಿಯವರೆಗೆ ಪ್ರಕೃತಿ ಮಾತೆ ತನ್ನ ಮೇಲಿನ ದೌರ್ಜನ್ಯಗಳನ್ನು ಸಹಿಸಿಕೊಳ್ಳುತ್ತಾಳೆ. ಮೇರೆ ಮಿರಿದಂತೆ ವಿಕೃತ ರೂಪ ತೋರುತ್ತಾಳೆ ಎಂದು ಸುಳ್ಯ ಎನ್ನೆಂಸಿಯ ರಸಾಯನಶಾಸ್ತ್ರ ಉಪನ್ಯಾಸಕಿ ಪ್ರಣಿತ ಬೆಳ್ಳೂರು ಹೇಳಿದರು
ಅವರು ನೆಹರು ಮೆಮೋರಿಯಲ್ ಪ.ಪೂ.ಕಾಲೇಜು ಸುಳ್ಯ ಇದರ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಮರಗಳು ಹೀಗೆ ನಶಿಸುತ್ತಾ ಹೋದರೆ ಭವಿಷ್ಯದಲ್ಲಿ ಮುಂದೊಂದು ದಿನ ಆಕ್ಸಿಜನ್ ಸಿಲಿಂಡರ್ ಗಳನ್ನು ನೇತು ಹಾಕಿಕೊಂಡು ಜೀವನ ಸಾಗಿಸಬೇಕಾದ ದೌರ್ಭಾಗ್ಯ ನಮ್ಮದಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.
ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಇವರು ಸಭಾದ್ಯಕ್ಷತೆ ವಹಿಸಿ ಪರಿಸರ ಕಾಳಜಿಯನ್ನು ಎಲ್ಲರೂ ವಹಿಸಬೇಕೆಂದು ಕರೆ ನೀಡಿದರು.
ವೇದಿಕೆಯಲ್ಲಿ ವಿ.ಕ್ಷೇಮಾಧಿಕಾರಿ ಲಕ್ಷ್ಮಣ್ ಏನೇಕಲ್ ,ಕಾರ್ಯಕ್ರಮ ಸಂಯೋಜಕರಾದ ದಾಮೋದರ ಪಿ ,ರತ್ನಾವತಿ ಬಿ, ಕು.ವಿನುತ ಕೆ.ಎನ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪ್ರದ್ಯುಮ್ನ,ಶ್ರೀಶ ನಾರಾಯಣ ಎ ಪರಿಸರ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಾದ ರಾಜಿತ ಪ್ರಾರ್ಥಿಸಿದರು, ನವ್ಯಕೃಷ್ಣ ಕೆ.ಎಸ್ ಸ್ವಾಗತಿಸಿ, ಅನಘ ಆರ್ ಯು,ನಂದಿತ ಎಂ.ವಿ,ಚರೀಷ್ಮ ಡಿ.ಎಸ್,ಅಕ್ಷತ ಎಸ್ ಪರಿಸರ ಗೀತೆ ಹಾಡಿದರು. ಪೃಥ್ವಿಶ್ರೀ ಕೆ ಅತಿಥಿಗಳನ್ನು ಪರಿಚಯಿಸಿದರು. ಕೌಶಿಕ್ ಕುರುಂಜಿ ವಂದಿಸಿದರು. ಜ್ಞಾನೇಶ್ ಕೆ.ಜೆ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಭಾಷಣ, ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಪ್ರಾಂಶುಪಾಲರು ಬಹುಮಾನ ವಿತರಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…