ಸುಳ್ಯ: ಮಾನವ ಇಂದು ಸ್ವಾರ್ಥಕ್ಕಾಗಿ ಪ್ರಕೃತಿಯ ಅಸ್ತಿತ್ವಕ್ಕೆ ಧಕ್ಕೆ ಉಂಟುಮಾಡುತ್ತಿದ್ದಾನೆ. ಒಂದು ಮಿತಿಯವರೆಗೆ ಪ್ರಕೃತಿ ಮಾತೆ ತನ್ನ ಮೇಲಿನ ದೌರ್ಜನ್ಯಗಳನ್ನು ಸಹಿಸಿಕೊಳ್ಳುತ್ತಾಳೆ. ಮೇರೆ ಮಿರಿದಂತೆ ವಿಕೃತ ರೂಪ ತೋರುತ್ತಾಳೆ ಎಂದು ಸುಳ್ಯ ಎನ್ನೆಂಸಿಯ ರಸಾಯನಶಾಸ್ತ್ರ ಉಪನ್ಯಾಸಕಿ ಪ್ರಣಿತ ಬೆಳ್ಳೂರು ಹೇಳಿದರು
ಅವರು ನೆಹರು ಮೆಮೋರಿಯಲ್ ಪ.ಪೂ.ಕಾಲೇಜು ಸುಳ್ಯ ಇದರ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಮರಗಳು ಹೀಗೆ ನಶಿಸುತ್ತಾ ಹೋದರೆ ಭವಿಷ್ಯದಲ್ಲಿ ಮುಂದೊಂದು ದಿನ ಆಕ್ಸಿಜನ್ ಸಿಲಿಂಡರ್ ಗಳನ್ನು ನೇತು ಹಾಕಿಕೊಂಡು ಜೀವನ ಸಾಗಿಸಬೇಕಾದ ದೌರ್ಭಾಗ್ಯ ನಮ್ಮದಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.
ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಇವರು ಸಭಾದ್ಯಕ್ಷತೆ ವಹಿಸಿ ಪರಿಸರ ಕಾಳಜಿಯನ್ನು ಎಲ್ಲರೂ ವಹಿಸಬೇಕೆಂದು ಕರೆ ನೀಡಿದರು.
ವೇದಿಕೆಯಲ್ಲಿ ವಿ.ಕ್ಷೇಮಾಧಿಕಾರಿ ಲಕ್ಷ್ಮಣ್ ಏನೇಕಲ್ ,ಕಾರ್ಯಕ್ರಮ ಸಂಯೋಜಕರಾದ ದಾಮೋದರ ಪಿ ,ರತ್ನಾವತಿ ಬಿ, ಕು.ವಿನುತ ಕೆ.ಎನ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪ್ರದ್ಯುಮ್ನ,ಶ್ರೀಶ ನಾರಾಯಣ ಎ ಪರಿಸರ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಾದ ರಾಜಿತ ಪ್ರಾರ್ಥಿಸಿದರು, ನವ್ಯಕೃಷ್ಣ ಕೆ.ಎಸ್ ಸ್ವಾಗತಿಸಿ, ಅನಘ ಆರ್ ಯು,ನಂದಿತ ಎಂ.ವಿ,ಚರೀಷ್ಮ ಡಿ.ಎಸ್,ಅಕ್ಷತ ಎಸ್ ಪರಿಸರ ಗೀತೆ ಹಾಡಿದರು. ಪೃಥ್ವಿಶ್ರೀ ಕೆ ಅತಿಥಿಗಳನ್ನು ಪರಿಚಯಿಸಿದರು. ಕೌಶಿಕ್ ಕುರುಂಜಿ ವಂದಿಸಿದರು. ಜ್ಞಾನೇಶ್ ಕೆ.ಜೆ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಭಾಷಣ, ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಪ್ರಾಂಶುಪಾಲರು ಬಹುಮಾನ ವಿತರಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…