ಸುಳ್ಯ ನ ಪಂ ಚುನಾವಣಾ ಫಲಿತಾಂಶ : ಸಂಭ್ರಮದಲ್ಲಿ ಬಿಜೆಪಿ ಕಾರ್ಯಕರ್ತರು

May 31, 2019
10:01 AM

ಸುಳ್ಯ: ನ ಪಂ ಚುನಾವಣಾ ಮತ ಎಣಿಕೆ ಮುಗಿದಿದೆ. ಬಿಜೆಪಿ ಅಭ್ಯರ್ಥಿಗಳು 14 ಸ್ಥಾನಗಳಲ್ಲಿ  ಗೆಲುವು ಸಾಧಿಸಿ ಬಹುಮತದೊಂದಿಗೆ ನಗರ ಪಂಚಾಯತ್ ಅಧಿಕಾರವನ್ನು ಸತತ 4 ನೇ ಬಾರಿಗೆ ಪಡೆದುಕೊಂಡಿದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ. ಸಂತಸವನ್ನು  ಹಂಚಿಕೊಳ್ಳುತ್ತಿದ್ದಾರೆ.

ಮತ ಎಣಿಕೆ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಕಾಲೇಜಿನ ಮುಂಭಾಗದಲ್ಲಿ ಎಲ್ಲಾ ಪಕ್ಷಗಳ ಕಾರ್ಯಕರ್ತರು ಆಗಮಿಸಿದ್ದರು. ಮತ ಎಣಿಕೆ ಮುಗಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.   ಈ ಬಾರಿ ಹೊಸಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿ ಹೊಸದೊಂದು ಪ್ರಯೋಗ ಮಾಡಿತ್ತು . ಇದರಲ್ಲಿ ಯಶಸ್ಸು ಕಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ : 

ಆದರೆ ರಾಜ್ಯದಲ್ಲಿ  ಒಟ್ಟು ಸ್ಥಳೀಯಾಡಳಿತ ಚುನಾವಣೆಯಲ್ಲಿ  ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.  ಒಟ್ಟು 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ನಡೆದ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.  ನಗರಸಭೆಯ 217 ವಾರ್ಡ್ ಗಳಲ್ಲಿ ಬಿಜೆಪಿ 28, ಕಾಂಗ್ರೆಸ್ 41, ಜೆಡಿಎಸ್ 21, ಇತರರು 16ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪುರಸಭೆಯ 717 ವಾರ್ಡ್ ಗಳಲ್ಲಿ 119 ರಲ್ಲಿ ಬಿಜೆಪಿ, 251ರಲ್ಲಿ ಕಾಂಗ್ರೆಸ್ ಮತ್ತು 75 ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಪಟ್ಟಣ ಪಂಚಾಯತ್ ನ  290 ವಾರ್ಡ್ ಗಳಲ್ಲಿ 117 ರಲ್ಲಿ ಬಿಜೆಪಿ, 78 ರಲ್ಲಿ ಕಾಂಗ್ರೆಸ್, 27 ರಲ್ಲಿ ಜೆಡಿಎಸ್ ಮತ್ತು ಇತರರು 29 ರಲ್ಲಿ ಮುನ್ನಡೆ ಸಾಧಿಸಿದ್ದಾರೆ.

ರಾಜ್ಯದಲ್ಲಿ  ಒಟ್ಟು  4360 ಮಂದಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ 1125 ಮಂದಿ, ಬಿಜೆಪಿಯಿಂದ 1125 ಮಂದಿ ,  ಜೆಡಿಎಸ್ ನಿಂದ 780 ಮಂದಿ ಕಣದಲ್ಲಿದ್ದಾರೆ.ಪಕ್ಷೇತರರಾಗಿ 1056 ಮಂದಿ ಕಣದಲ್ಲಿ ಇದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror