Advertisement
ನಮ್ಮೂರ ಸುದ್ದಿ

ಸುಳ್ಯ ನ ಪಂ ಚುನಾವಣಾ ಫಲಿತಾಂಶ : ಸಂಭ್ರಮದಲ್ಲಿ ಬಿಜೆಪಿ ಕಾರ್ಯಕರ್ತರು

Share

ಸುಳ್ಯ: ನ ಪಂ ಚುನಾವಣಾ ಮತ ಎಣಿಕೆ ಮುಗಿದಿದೆ. ಬಿಜೆಪಿ ಅಭ್ಯರ್ಥಿಗಳು 14 ಸ್ಥಾನಗಳಲ್ಲಿ  ಗೆಲುವು ಸಾಧಿಸಿ ಬಹುಮತದೊಂದಿಗೆ ನಗರ ಪಂಚಾಯತ್ ಅಧಿಕಾರವನ್ನು ಸತತ 4 ನೇ ಬಾರಿಗೆ ಪಡೆದುಕೊಂಡಿದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ. ಸಂತಸವನ್ನು  ಹಂಚಿಕೊಳ್ಳುತ್ತಿದ್ದಾರೆ.

ಮತ ಎಣಿಕೆ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಕಾಲೇಜಿನ ಮುಂಭಾಗದಲ್ಲಿ ಎಲ್ಲಾ ಪಕ್ಷಗಳ ಕಾರ್ಯಕರ್ತರು ಆಗಮಿಸಿದ್ದರು. ಮತ ಎಣಿಕೆ ಮುಗಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.   ಈ ಬಾರಿ ಹೊಸಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿ ಹೊಸದೊಂದು ಪ್ರಯೋಗ ಮಾಡಿತ್ತು . ಇದರಲ್ಲಿ ಯಶಸ್ಸು ಕಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ : 

ಆದರೆ ರಾಜ್ಯದಲ್ಲಿ  ಒಟ್ಟು ಸ್ಥಳೀಯಾಡಳಿತ ಚುನಾವಣೆಯಲ್ಲಿ  ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.  ಒಟ್ಟು 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ನಡೆದ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.  ನಗರಸಭೆಯ 217 ವಾರ್ಡ್ ಗಳಲ್ಲಿ ಬಿಜೆಪಿ 28, ಕಾಂಗ್ರೆಸ್ 41, ಜೆಡಿಎಸ್ 21, ಇತರರು 16ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪುರಸಭೆಯ 717 ವಾರ್ಡ್ ಗಳಲ್ಲಿ 119 ರಲ್ಲಿ ಬಿಜೆಪಿ, 251ರಲ್ಲಿ ಕಾಂಗ್ರೆಸ್ ಮತ್ತು 75 ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಪಟ್ಟಣ ಪಂಚಾಯತ್ ನ  290 ವಾರ್ಡ್ ಗಳಲ್ಲಿ 117 ರಲ್ಲಿ ಬಿಜೆಪಿ, 78 ರಲ್ಲಿ ಕಾಂಗ್ರೆಸ್, 27 ರಲ್ಲಿ ಜೆಡಿಎಸ್ ಮತ್ತು ಇತರರು 29 ರಲ್ಲಿ ಮುನ್ನಡೆ ಸಾಧಿಸಿದ್ದಾರೆ.

ರಾಜ್ಯದಲ್ಲಿ  ಒಟ್ಟು  4360 ಮಂದಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ 1125 ಮಂದಿ, ಬಿಜೆಪಿಯಿಂದ 1125 ಮಂದಿ ,  ಜೆಡಿಎಸ್ ನಿಂದ 780 ಮಂದಿ ಕಣದಲ್ಲಿದ್ದಾರೆ.ಪಕ್ಷೇತರರಾಗಿ 1056 ಮಂದಿ ಕಣದಲ್ಲಿ ಇದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

2 hours ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

10 hours ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

10 hours ago

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

1 day ago

ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ

ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…

1 day ago

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

2 days ago