ನಮ್ಮೂರ ಸುದ್ದಿ

ಸುಳ್ಯ ನ ಪಂ ಚುನಾವಣಾ ಫಲಿತಾಂಶ : ಸಂಭ್ರಮದಲ್ಲಿ ಬಿಜೆಪಿ ಕಾರ್ಯಕರ್ತರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ನ ಪಂ ಚುನಾವಣಾ ಮತ ಎಣಿಕೆ ಮುಗಿದಿದೆ. ಬಿಜೆಪಿ ಅಭ್ಯರ್ಥಿಗಳು 14 ಸ್ಥಾನಗಳಲ್ಲಿ  ಗೆಲುವು ಸಾಧಿಸಿ ಬಹುಮತದೊಂದಿಗೆ ನಗರ ಪಂಚಾಯತ್ ಅಧಿಕಾರವನ್ನು ಸತತ 4 ನೇ ಬಾರಿಗೆ ಪಡೆದುಕೊಂಡಿದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ. ಸಂತಸವನ್ನು  ಹಂಚಿಕೊಳ್ಳುತ್ತಿದ್ದಾರೆ.

Advertisement
Advertisement

ಮತ ಎಣಿಕೆ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಕಾಲೇಜಿನ ಮುಂಭಾಗದಲ್ಲಿ ಎಲ್ಲಾ ಪಕ್ಷಗಳ ಕಾರ್ಯಕರ್ತರು ಆಗಮಿಸಿದ್ದರು. ಮತ ಎಣಿಕೆ ಮುಗಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.   ಈ ಬಾರಿ ಹೊಸಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿ ಹೊಸದೊಂದು ಪ್ರಯೋಗ ಮಾಡಿತ್ತು . ಇದರಲ್ಲಿ ಯಶಸ್ಸು ಕಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ : 

ಆದರೆ ರಾಜ್ಯದಲ್ಲಿ  ಒಟ್ಟು ಸ್ಥಳೀಯಾಡಳಿತ ಚುನಾವಣೆಯಲ್ಲಿ  ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.  ಒಟ್ಟು 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ನಡೆದ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.  ನಗರಸಭೆಯ 217 ವಾರ್ಡ್ ಗಳಲ್ಲಿ ಬಿಜೆಪಿ 28, ಕಾಂಗ್ರೆಸ್ 41, ಜೆಡಿಎಸ್ 21, ಇತರರು 16ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪುರಸಭೆಯ 717 ವಾರ್ಡ್ ಗಳಲ್ಲಿ 119 ರಲ್ಲಿ ಬಿಜೆಪಿ, 251ರಲ್ಲಿ ಕಾಂಗ್ರೆಸ್ ಮತ್ತು 75 ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಪಟ್ಟಣ ಪಂಚಾಯತ್ ನ  290 ವಾರ್ಡ್ ಗಳಲ್ಲಿ 117 ರಲ್ಲಿ ಬಿಜೆಪಿ, 78 ರಲ್ಲಿ ಕಾಂಗ್ರೆಸ್, 27 ರಲ್ಲಿ ಜೆಡಿಎಸ್ ಮತ್ತು ಇತರರು 29 ರಲ್ಲಿ ಮುನ್ನಡೆ ಸಾಧಿಸಿದ್ದಾರೆ.

ರಾಜ್ಯದಲ್ಲಿ  ಒಟ್ಟು  4360 ಮಂದಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ 1125 ಮಂದಿ, ಬಿಜೆಪಿಯಿಂದ 1125 ಮಂದಿ ,  ಜೆಡಿಎಸ್ ನಿಂದ 780 ಮಂದಿ ಕಣದಲ್ಲಿದ್ದಾರೆ.ಪಕ್ಷೇತರರಾಗಿ 1056 ಮಂದಿ ಕಣದಲ್ಲಿ ಇದ್ದಾರೆ.

Advertisement

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

5 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ…

5 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು…

6 hours ago

ಮನ ಗೆಲ್ಲುವ ಮಾವಿನ ಹಣ್ಣುಗಳು

ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ…

6 hours ago

ಕೃಷಿ-ಮಾರುಕಟ್ಟೆ | ಚಾಲಿ ಅಡಿಕೆಯ ಉಪಯೋಗದ ವಿಧಾನಗಳು

ಅಡಿಕೆಯನ್ನು ಮುಖ್ಯವಾಗಿ ಬೀಡಾದ ತಯಾರಿಯಲ್ಲಿ ಒಂದು ಮೂಲ ಉತ್ಪನ್ನ ಆಗಿ ಬಳಸಲಾಗುತ್ತಿದೆ.ಇದನ್ನು ವಿವಿಧ…

7 hours ago

ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |

ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…

7 hours ago