Advertisement
ನಮ್ಮೂರ ಸುದ್ದಿ

ಸುಳ್ಯ ನ ಪಂ ಚುನಾವಣಾ ಫಲಿತಾಂಶ : ಸಂಭ್ರಮದಲ್ಲಿ ಬಿಜೆಪಿ ಕಾರ್ಯಕರ್ತರು

Share

ಸುಳ್ಯ: ನ ಪಂ ಚುನಾವಣಾ ಮತ ಎಣಿಕೆ ಮುಗಿದಿದೆ. ಬಿಜೆಪಿ ಅಭ್ಯರ್ಥಿಗಳು 14 ಸ್ಥಾನಗಳಲ್ಲಿ  ಗೆಲುವು ಸಾಧಿಸಿ ಬಹುಮತದೊಂದಿಗೆ ನಗರ ಪಂಚಾಯತ್ ಅಧಿಕಾರವನ್ನು ಸತತ 4 ನೇ ಬಾರಿಗೆ ಪಡೆದುಕೊಂಡಿದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ. ಸಂತಸವನ್ನು  ಹಂಚಿಕೊಳ್ಳುತ್ತಿದ್ದಾರೆ.

ಮತ ಎಣಿಕೆ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಕಾಲೇಜಿನ ಮುಂಭಾಗದಲ್ಲಿ ಎಲ್ಲಾ ಪಕ್ಷಗಳ ಕಾರ್ಯಕರ್ತರು ಆಗಮಿಸಿದ್ದರು. ಮತ ಎಣಿಕೆ ಮುಗಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.   ಈ ಬಾರಿ ಹೊಸಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿ ಹೊಸದೊಂದು ಪ್ರಯೋಗ ಮಾಡಿತ್ತು . ಇದರಲ್ಲಿ ಯಶಸ್ಸು ಕಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ : 

ಆದರೆ ರಾಜ್ಯದಲ್ಲಿ  ಒಟ್ಟು ಸ್ಥಳೀಯಾಡಳಿತ ಚುನಾವಣೆಯಲ್ಲಿ  ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.  ಒಟ್ಟು 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ನಡೆದ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.  ನಗರಸಭೆಯ 217 ವಾರ್ಡ್ ಗಳಲ್ಲಿ ಬಿಜೆಪಿ 28, ಕಾಂಗ್ರೆಸ್ 41, ಜೆಡಿಎಸ್ 21, ಇತರರು 16ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪುರಸಭೆಯ 717 ವಾರ್ಡ್ ಗಳಲ್ಲಿ 119 ರಲ್ಲಿ ಬಿಜೆಪಿ, 251ರಲ್ಲಿ ಕಾಂಗ್ರೆಸ್ ಮತ್ತು 75 ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಪಟ್ಟಣ ಪಂಚಾಯತ್ ನ  290 ವಾರ್ಡ್ ಗಳಲ್ಲಿ 117 ರಲ್ಲಿ ಬಿಜೆಪಿ, 78 ರಲ್ಲಿ ಕಾಂಗ್ರೆಸ್, 27 ರಲ್ಲಿ ಜೆಡಿಎಸ್ ಮತ್ತು ಇತರರು 29 ರಲ್ಲಿ ಮುನ್ನಡೆ ಸಾಧಿಸಿದ್ದಾರೆ.

ರಾಜ್ಯದಲ್ಲಿ  ಒಟ್ಟು  4360 ಮಂದಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ 1125 ಮಂದಿ, ಬಿಜೆಪಿಯಿಂದ 1125 ಮಂದಿ ,  ಜೆಡಿಎಸ್ ನಿಂದ 780 ಮಂದಿ ಕಣದಲ್ಲಿದ್ದಾರೆ.ಪಕ್ಷೇತರರಾಗಿ 1056 ಮಂದಿ ಕಣದಲ್ಲಿ ಇದ್ದಾರೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

37 minutes ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

3 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

8 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

8 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

16 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

16 hours ago