Advertisement
ನಮ್ಮೂರ ಸುದ್ದಿ

ಸುಳ್ಯ ನ ಪಂ ಚುನಾವಣಾ ಫಲಿತಾಂಶ : ಸಂಭ್ರಮದಲ್ಲಿ ಬಿಜೆಪಿ ಕಾರ್ಯಕರ್ತರು

Share

ಸುಳ್ಯ: ನ ಪಂ ಚುನಾವಣಾ ಮತ ಎಣಿಕೆ ಮುಗಿದಿದೆ. ಬಿಜೆಪಿ ಅಭ್ಯರ್ಥಿಗಳು 14 ಸ್ಥಾನಗಳಲ್ಲಿ  ಗೆಲುವು ಸಾಧಿಸಿ ಬಹುಮತದೊಂದಿಗೆ ನಗರ ಪಂಚಾಯತ್ ಅಧಿಕಾರವನ್ನು ಸತತ 4 ನೇ ಬಾರಿಗೆ ಪಡೆದುಕೊಂಡಿದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ. ಸಂತಸವನ್ನು  ಹಂಚಿಕೊಳ್ಳುತ್ತಿದ್ದಾರೆ.

ಮತ ಎಣಿಕೆ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಕಾಲೇಜಿನ ಮುಂಭಾಗದಲ್ಲಿ ಎಲ್ಲಾ ಪಕ್ಷಗಳ ಕಾರ್ಯಕರ್ತರು ಆಗಮಿಸಿದ್ದರು. ಮತ ಎಣಿಕೆ ಮುಗಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.   ಈ ಬಾರಿ ಹೊಸಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿ ಹೊಸದೊಂದು ಪ್ರಯೋಗ ಮಾಡಿತ್ತು . ಇದರಲ್ಲಿ ಯಶಸ್ಸು ಕಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ : 

ಆದರೆ ರಾಜ್ಯದಲ್ಲಿ  ಒಟ್ಟು ಸ್ಥಳೀಯಾಡಳಿತ ಚುನಾವಣೆಯಲ್ಲಿ  ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.  ಒಟ್ಟು 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ನಡೆದ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.  ನಗರಸಭೆಯ 217 ವಾರ್ಡ್ ಗಳಲ್ಲಿ ಬಿಜೆಪಿ 28, ಕಾಂಗ್ರೆಸ್ 41, ಜೆಡಿಎಸ್ 21, ಇತರರು 16ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪುರಸಭೆಯ 717 ವಾರ್ಡ್ ಗಳಲ್ಲಿ 119 ರಲ್ಲಿ ಬಿಜೆಪಿ, 251ರಲ್ಲಿ ಕಾಂಗ್ರೆಸ್ ಮತ್ತು 75 ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಪಟ್ಟಣ ಪಂಚಾಯತ್ ನ  290 ವಾರ್ಡ್ ಗಳಲ್ಲಿ 117 ರಲ್ಲಿ ಬಿಜೆಪಿ, 78 ರಲ್ಲಿ ಕಾಂಗ್ರೆಸ್, 27 ರಲ್ಲಿ ಜೆಡಿಎಸ್ ಮತ್ತು ಇತರರು 29 ರಲ್ಲಿ ಮುನ್ನಡೆ ಸಾಧಿಸಿದ್ದಾರೆ.

ರಾಜ್ಯದಲ್ಲಿ  ಒಟ್ಟು  4360 ಮಂದಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ 1125 ಮಂದಿ, ಬಿಜೆಪಿಯಿಂದ 1125 ಮಂದಿ ,  ಜೆಡಿಎಸ್ ನಿಂದ 780 ಮಂದಿ ಕಣದಲ್ಲಿದ್ದಾರೆ.ಪಕ್ಷೇತರರಾಗಿ 1056 ಮಂದಿ ಕಣದಲ್ಲಿ ಇದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

7 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

20 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago