Advertisement
ನಮ್ಮೂರ ಸುದ್ದಿ

ಸುಳ್ಯ ನ ಪಂ ಚುನಾವಣಾ ಫಲಿತಾಂಶ : ಸಂಭ್ರಮದಲ್ಲಿ ಬಿಜೆಪಿ ಕಾರ್ಯಕರ್ತರು

Share

ಸುಳ್ಯ: ನ ಪಂ ಚುನಾವಣಾ ಮತ ಎಣಿಕೆ ಮುಗಿದಿದೆ. ಬಿಜೆಪಿ ಅಭ್ಯರ್ಥಿಗಳು 14 ಸ್ಥಾನಗಳಲ್ಲಿ  ಗೆಲುವು ಸಾಧಿಸಿ ಬಹುಮತದೊಂದಿಗೆ ನಗರ ಪಂಚಾಯತ್ ಅಧಿಕಾರವನ್ನು ಸತತ 4 ನೇ ಬಾರಿಗೆ ಪಡೆದುಕೊಂಡಿದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ. ಸಂತಸವನ್ನು  ಹಂಚಿಕೊಳ್ಳುತ್ತಿದ್ದಾರೆ.

ಮತ ಎಣಿಕೆ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಕಾಲೇಜಿನ ಮುಂಭಾಗದಲ್ಲಿ ಎಲ್ಲಾ ಪಕ್ಷಗಳ ಕಾರ್ಯಕರ್ತರು ಆಗಮಿಸಿದ್ದರು. ಮತ ಎಣಿಕೆ ಮುಗಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.   ಈ ಬಾರಿ ಹೊಸಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿ ಹೊಸದೊಂದು ಪ್ರಯೋಗ ಮಾಡಿತ್ತು . ಇದರಲ್ಲಿ ಯಶಸ್ಸು ಕಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ : 

ಆದರೆ ರಾಜ್ಯದಲ್ಲಿ  ಒಟ್ಟು ಸ್ಥಳೀಯಾಡಳಿತ ಚುನಾವಣೆಯಲ್ಲಿ  ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.  ಒಟ್ಟು 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ನಡೆದ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.  ನಗರಸಭೆಯ 217 ವಾರ್ಡ್ ಗಳಲ್ಲಿ ಬಿಜೆಪಿ 28, ಕಾಂಗ್ರೆಸ್ 41, ಜೆಡಿಎಸ್ 21, ಇತರರು 16ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪುರಸಭೆಯ 717 ವಾರ್ಡ್ ಗಳಲ್ಲಿ 119 ರಲ್ಲಿ ಬಿಜೆಪಿ, 251ರಲ್ಲಿ ಕಾಂಗ್ರೆಸ್ ಮತ್ತು 75 ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಪಟ್ಟಣ ಪಂಚಾಯತ್ ನ  290 ವಾರ್ಡ್ ಗಳಲ್ಲಿ 117 ರಲ್ಲಿ ಬಿಜೆಪಿ, 78 ರಲ್ಲಿ ಕಾಂಗ್ರೆಸ್, 27 ರಲ್ಲಿ ಜೆಡಿಎಸ್ ಮತ್ತು ಇತರರು 29 ರಲ್ಲಿ ಮುನ್ನಡೆ ಸಾಧಿಸಿದ್ದಾರೆ.

ರಾಜ್ಯದಲ್ಲಿ  ಒಟ್ಟು  4360 ಮಂದಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ 1125 ಮಂದಿ, ಬಿಜೆಪಿಯಿಂದ 1125 ಮಂದಿ ,  ಜೆಡಿಎಸ್ ನಿಂದ 780 ಮಂದಿ ಕಣದಲ್ಲಿದ್ದಾರೆ.ಪಕ್ಷೇತರರಾಗಿ 1056 ಮಂದಿ ಕಣದಲ್ಲಿ ಇದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

15 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

17 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

2 days ago