ಸುದ್ದಿಗಳು

ಸುಳ್ಯ ನ.ಪಂ.ಚುನಾವಣೆಯಲ್ಲಿ ಮೈತ್ರಿ ಸಂಭವ : ಜೆಡಿಎಸ್ ಮೂರು ಕಡೆ ಸ್ಪರ್ಧೆ ?

Share

*ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ

ಸುಳ್ಯ: ರಾಜ್ಯ ಸರಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿಯೂ ಮೈತ್ರಿ ಏರ್ಪಡುವ ಸಂಭವ ಇದೆ‌. ಈ ಕುರಿತು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಮಧ್ಯೆ ಒಂದು ಹಂತದ ಮಾತುಕತೆ ನಡೆದಿದೆ. ಮೂರು ವಾರ್ಡ್ ಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಮಧ್ಯೆ ನಡೆದ ಚರ್ಚೆಯಲ್ಲಿ ಜಯನಗರ, ಶಾಂತಿನಗರ, ನಾವೂರು ವಾರ್ಡ್ ಗಳನ್ನು ಬಿಟ್ಟು ಕೊಡಬೇಕು ಎಂದು ಜೆಡಿಎಸ್ ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿ. ನಾಮಪತ್ರ ಹಿಂಪಡೆಯುವ ಅವಧಿ ಮುಗಿಯುವುದರೊಳಗೆ ಚರ್ಚೆ ನಡೆಸಿ ವಾರ್ಡ್ ಗಳನ್ನು ಹಂಚಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂಬ ಸಲಹೆಯನ್ನು ಕಾಂಗ್ರೆಸ್ ಮುಖಂಡರು ಮುಂದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಇಳಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.  ಆದರೆ ಜಯನಗರ ಮತ್ತು ಶಾಂತಿನಗರ ವಾರ್ಡ್ ಗಳಲ್ಲಿ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ನಾವೂರು ವಾರ್ಡ್ ನಲ್ಲಿ ಕಾಂಗ್ರೆಸ್ ನ ಪ್ರಮುಖರು ಅಭ್ಯರ್ಥಿಯಾಗಲು ರೇಸ್ ನಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಮೈತ್ರಿ ಉಂಟಾದಲ್ಲಿ ಯಾವ ರೀತಿಯ ಬದಲಾವಣೆ ಆಗಲಿದೆ ಎಂಬ ಕುತೂಹಲ ಮೂಡಿದೆ.

ಕಳೆದ ಅವಧಿಗಿಂತ ಮೊದಲು ನಗರ ಪಂಚಾಯತ್ ನಲ್ಲಿ ಜೆಡಿಎಸ್ ಸದಸ್ಯರು ಇದ್ದರು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿಯೇ ಸ್ಪರ್ಧೆಗೆ ಇಳಿಯುತ್ತಿತ್ತು. ಈಗ ರಾಜ್ಯದಲ್ಲಿ ಉಂಟಾಗಿರುವ ಮೈತ್ರಿಯ ಹಿನ್ನಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಎದುರಿಸಲು ಎರಡೂ ಪಕ್ಷಗಳು ಕೈ ಜೋಡಿಸಲಿದೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆಯಲ್ಲಿಯೂ ಎರಡೂ ಪಕ್ಷಗಳು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

5 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

6 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

6 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

22 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

22 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

22 hours ago