Advertisement
ಸುದ್ದಿಗಳು

ಸುಳ್ಯ ನ.ಪಂ.ಚುನಾವಣೆಯಲ್ಲಿ ಮೈತ್ರಿ ಸಂಭವ : ಜೆಡಿಎಸ್ ಮೂರು ಕಡೆ ಸ್ಪರ್ಧೆ ?

Share

*ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ

ಸುಳ್ಯ: ರಾಜ್ಯ ಸರಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿಯೂ ಮೈತ್ರಿ ಏರ್ಪಡುವ ಸಂಭವ ಇದೆ‌. ಈ ಕುರಿತು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಮಧ್ಯೆ ಒಂದು ಹಂತದ ಮಾತುಕತೆ ನಡೆದಿದೆ. ಮೂರು ವಾರ್ಡ್ ಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಮಧ್ಯೆ ನಡೆದ ಚರ್ಚೆಯಲ್ಲಿ ಜಯನಗರ, ಶಾಂತಿನಗರ, ನಾವೂರು ವಾರ್ಡ್ ಗಳನ್ನು ಬಿಟ್ಟು ಕೊಡಬೇಕು ಎಂದು ಜೆಡಿಎಸ್ ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿ. ನಾಮಪತ್ರ ಹಿಂಪಡೆಯುವ ಅವಧಿ ಮುಗಿಯುವುದರೊಳಗೆ ಚರ್ಚೆ ನಡೆಸಿ ವಾರ್ಡ್ ಗಳನ್ನು ಹಂಚಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂಬ ಸಲಹೆಯನ್ನು ಕಾಂಗ್ರೆಸ್ ಮುಖಂಡರು ಮುಂದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಇಳಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.  ಆದರೆ ಜಯನಗರ ಮತ್ತು ಶಾಂತಿನಗರ ವಾರ್ಡ್ ಗಳಲ್ಲಿ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ನಾವೂರು ವಾರ್ಡ್ ನಲ್ಲಿ ಕಾಂಗ್ರೆಸ್ ನ ಪ್ರಮುಖರು ಅಭ್ಯರ್ಥಿಯಾಗಲು ರೇಸ್ ನಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಮೈತ್ರಿ ಉಂಟಾದಲ್ಲಿ ಯಾವ ರೀತಿಯ ಬದಲಾವಣೆ ಆಗಲಿದೆ ಎಂಬ ಕುತೂಹಲ ಮೂಡಿದೆ.

ಕಳೆದ ಅವಧಿಗಿಂತ ಮೊದಲು ನಗರ ಪಂಚಾಯತ್ ನಲ್ಲಿ ಜೆಡಿಎಸ್ ಸದಸ್ಯರು ಇದ್ದರು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿಯೇ ಸ್ಪರ್ಧೆಗೆ ಇಳಿಯುತ್ತಿತ್ತು. ಈಗ ರಾಜ್ಯದಲ್ಲಿ ಉಂಟಾಗಿರುವ ಮೈತ್ರಿಯ ಹಿನ್ನಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಎದುರಿಸಲು ಎರಡೂ ಪಕ್ಷಗಳು ಕೈ ಜೋಡಿಸಲಿದೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆಯಲ್ಲಿಯೂ ಎರಡೂ ಪಕ್ಷಗಳು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

25 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

34 minutes ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

49 minutes ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

11 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago