ಸುಳ್ಯ: ಲೋಕಸಭಾ ಸಭಾ ಚುನಾವಣೆಯ ಬಿಸಿ ತಣ್ಣಗಾಗುತ್ತಿದ್ದಂತೆ ಸುಳ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಕಾವು ಆರಂಭಗೊಂಡಿತ್ತು. ಇದೀಗ ನಗರ ಪಂಚಾ ಯತ್ ಚುನಾವಣೆಯ ಪ್ರಚಾರದ ಕಾವು ಏರುತ್ತಿದ್ದಂತೆ ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲ ಹೆಚ್ಚಿದೆ.
ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಏರ್ಪಟ್ಟಿತು. ಸುಳ್ಯ ನಗರ ಪಂಚಾಯತ್ ಚುನಾವಣಾ ರಂಗದಲ್ಲಿಯೂ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೇ ನೇರ ಎದುರಾಳಿಗಳು. ಆದುದರಿಂದ ನ.ಪಂ.ಚುನಾವಣೆಯ ಬಿಝಿಯ ಮಧ್ಯೆಯೂ ಲೋಕಸಭಾ ಫಲಿತಾಂಶದ ಮೇಲೆ ಎರಡೂ ಪಕ್ಷಗಳು ಕಣ್ಣಿಟ್ಟಿದೆ. ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಪಕ್ಷಕ್ಕೆ ನ.ಪಂ.ಚುನಾವಣಾ ಪ್ರಚಾರಕ್ಕೆ ಟಾನಿಕ್ ಸಿಕ್ಕಿದಂತಾದರೆ, ಸೋಲುವ ಪಕ್ಷಗಳಿಗೆ ಇನ್ನಷ್ಟು ಜಾಗೃತರಾಗುವ ಮತ್ತು ಪ್ರಚಾರ ತಂತ್ರವನ್ನು ಬದಲಿಸಿ ಕಣದಲ್ಲಿ ಮುಂದುವರಿಯುವ ಅವಕಾಶ ಸಿಕ್ಕಿದಂತಾಗುತ್ತದೆ. ಹೀಗೆ ಲೋಕ ಫಲಿತಾಂಶ ಸ್ಥಳೀಯ ಸಂಸ್ಥೆ ಚುನಾವಾಣಾ ಪ್ರಚಾರದಲ್ಲಿಯೂ ಪ್ರತಿಫಲಿಸಲಿದೆಯೇ ಎಂಬ ಕುತೂಹಲ ಮೂಡಿದೆ. ನಗರದಲ್ಲಿ ಎಷ್ಟು ಲೀಡ್ ಸಿಕ್ಕಿದೆ ಎನ್ನುವುದು ಸ್ಥಳೀಯ ಸಂಸ್ಥೆಯ ಚುನಾವಣೆಗೆ ದಿಕ್ಸೂಚಿಯಾಗದೇ ಇದ್ದರೂ ಕೊಂಚ ಪ್ರಭಾವ, ಪರಿಣಾಮವಾಗಬಹುದು ಎಂದು ವಿಶ್ಲೇಷಿಸಲಾಗಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…