ಸುಳ್ಯ: ಲೋಕಸಭಾ ಸಭಾ ಚುನಾವಣೆಯ ಬಿಸಿ ತಣ್ಣಗಾಗುತ್ತಿದ್ದಂತೆ ಸುಳ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಕಾವು ಆರಂಭಗೊಂಡಿತ್ತು. ಇದೀಗ ನಗರ ಪಂಚಾ ಯತ್ ಚುನಾವಣೆಯ ಪ್ರಚಾರದ ಕಾವು ಏರುತ್ತಿದ್ದಂತೆ ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲ ಹೆಚ್ಚಿದೆ.
ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಏರ್ಪಟ್ಟಿತು. ಸುಳ್ಯ ನಗರ ಪಂಚಾಯತ್ ಚುನಾವಣಾ ರಂಗದಲ್ಲಿಯೂ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೇ ನೇರ ಎದುರಾಳಿಗಳು. ಆದುದರಿಂದ ನ.ಪಂ.ಚುನಾವಣೆಯ ಬಿಝಿಯ ಮಧ್ಯೆಯೂ ಲೋಕಸಭಾ ಫಲಿತಾಂಶದ ಮೇಲೆ ಎರಡೂ ಪಕ್ಷಗಳು ಕಣ್ಣಿಟ್ಟಿದೆ. ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಪಕ್ಷಕ್ಕೆ ನ.ಪಂ.ಚುನಾವಣಾ ಪ್ರಚಾರಕ್ಕೆ ಟಾನಿಕ್ ಸಿಕ್ಕಿದಂತಾದರೆ, ಸೋಲುವ ಪಕ್ಷಗಳಿಗೆ ಇನ್ನಷ್ಟು ಜಾಗೃತರಾಗುವ ಮತ್ತು ಪ್ರಚಾರ ತಂತ್ರವನ್ನು ಬದಲಿಸಿ ಕಣದಲ್ಲಿ ಮುಂದುವರಿಯುವ ಅವಕಾಶ ಸಿಕ್ಕಿದಂತಾಗುತ್ತದೆ. ಹೀಗೆ ಲೋಕ ಫಲಿತಾಂಶ ಸ್ಥಳೀಯ ಸಂಸ್ಥೆ ಚುನಾವಾಣಾ ಪ್ರಚಾರದಲ್ಲಿಯೂ ಪ್ರತಿಫಲಿಸಲಿದೆಯೇ ಎಂಬ ಕುತೂಹಲ ಮೂಡಿದೆ. ನಗರದಲ್ಲಿ ಎಷ್ಟು ಲೀಡ್ ಸಿಕ್ಕಿದೆ ಎನ್ನುವುದು ಸ್ಥಳೀಯ ಸಂಸ್ಥೆಯ ಚುನಾವಣೆಗೆ ದಿಕ್ಸೂಚಿಯಾಗದೇ ಇದ್ದರೂ ಕೊಂಚ ಪ್ರಭಾವ, ಪರಿಣಾಮವಾಗಬಹುದು ಎಂದು ವಿಶ್ಲೇಷಿಸಲಾಗಿದೆ.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…