ಸುಳ್ಯ: ಲೋಕಸಭಾ ಸಭಾ ಚುನಾವಣೆಯ ಬಿಸಿ ತಣ್ಣಗಾಗುತ್ತಿದ್ದಂತೆ ಸುಳ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಕಾವು ಆರಂಭಗೊಂಡಿತ್ತು. ಇದೀಗ ನಗರ ಪಂಚಾ ಯತ್ ಚುನಾವಣೆಯ ಪ್ರಚಾರದ ಕಾವು ಏರುತ್ತಿದ್ದಂತೆ ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲ ಹೆಚ್ಚಿದೆ.
ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಏರ್ಪಟ್ಟಿತು. ಸುಳ್ಯ ನಗರ ಪಂಚಾಯತ್ ಚುನಾವಣಾ ರಂಗದಲ್ಲಿಯೂ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೇ ನೇರ ಎದುರಾಳಿಗಳು. ಆದುದರಿಂದ ನ.ಪಂ.ಚುನಾವಣೆಯ ಬಿಝಿಯ ಮಧ್ಯೆಯೂ ಲೋಕಸಭಾ ಫಲಿತಾಂಶದ ಮೇಲೆ ಎರಡೂ ಪಕ್ಷಗಳು ಕಣ್ಣಿಟ್ಟಿದೆ. ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಪಕ್ಷಕ್ಕೆ ನ.ಪಂ.ಚುನಾವಣಾ ಪ್ರಚಾರಕ್ಕೆ ಟಾನಿಕ್ ಸಿಕ್ಕಿದಂತಾದರೆ, ಸೋಲುವ ಪಕ್ಷಗಳಿಗೆ ಇನ್ನಷ್ಟು ಜಾಗೃತರಾಗುವ ಮತ್ತು ಪ್ರಚಾರ ತಂತ್ರವನ್ನು ಬದಲಿಸಿ ಕಣದಲ್ಲಿ ಮುಂದುವರಿಯುವ ಅವಕಾಶ ಸಿಕ್ಕಿದಂತಾಗುತ್ತದೆ. ಹೀಗೆ ಲೋಕ ಫಲಿತಾಂಶ ಸ್ಥಳೀಯ ಸಂಸ್ಥೆ ಚುನಾವಾಣಾ ಪ್ರಚಾರದಲ್ಲಿಯೂ ಪ್ರತಿಫಲಿಸಲಿದೆಯೇ ಎಂಬ ಕುತೂಹಲ ಮೂಡಿದೆ. ನಗರದಲ್ಲಿ ಎಷ್ಟು ಲೀಡ್ ಸಿಕ್ಕಿದೆ ಎನ್ನುವುದು ಸ್ಥಳೀಯ ಸಂಸ್ಥೆಯ ಚುನಾವಣೆಗೆ ದಿಕ್ಸೂಚಿಯಾಗದೇ ಇದ್ದರೂ ಕೊಂಚ ಪ್ರಭಾವ, ಪರಿಣಾಮವಾಗಬಹುದು ಎಂದು ವಿಶ್ಲೇಷಿಸಲಾಗಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…