ಸುಳ್ಯ: ಲೋಕಸಭಾ ಸಭಾ ಚುನಾವಣೆಯ ಬಿಸಿ ತಣ್ಣಗಾಗುತ್ತಿದ್ದಂತೆ ಸುಳ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಕಾವು ಆರಂಭಗೊಂಡಿತ್ತು. ಇದೀಗ ನಗರ ಪಂಚಾ ಯತ್ ಚುನಾವಣೆಯ ಪ್ರಚಾರದ ಕಾವು ಏರುತ್ತಿದ್ದಂತೆ ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲ ಹೆಚ್ಚಿದೆ.
ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಏರ್ಪಟ್ಟಿತು. ಸುಳ್ಯ ನಗರ ಪಂಚಾಯತ್ ಚುನಾವಣಾ ರಂಗದಲ್ಲಿಯೂ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೇ ನೇರ ಎದುರಾಳಿಗಳು. ಆದುದರಿಂದ ನ.ಪಂ.ಚುನಾವಣೆಯ ಬಿಝಿಯ ಮಧ್ಯೆಯೂ ಲೋಕಸಭಾ ಫಲಿತಾಂಶದ ಮೇಲೆ ಎರಡೂ ಪಕ್ಷಗಳು ಕಣ್ಣಿಟ್ಟಿದೆ. ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಪಕ್ಷಕ್ಕೆ ನ.ಪಂ.ಚುನಾವಣಾ ಪ್ರಚಾರಕ್ಕೆ ಟಾನಿಕ್ ಸಿಕ್ಕಿದಂತಾದರೆ, ಸೋಲುವ ಪಕ್ಷಗಳಿಗೆ ಇನ್ನಷ್ಟು ಜಾಗೃತರಾಗುವ ಮತ್ತು ಪ್ರಚಾರ ತಂತ್ರವನ್ನು ಬದಲಿಸಿ ಕಣದಲ್ಲಿ ಮುಂದುವರಿಯುವ ಅವಕಾಶ ಸಿಕ್ಕಿದಂತಾಗುತ್ತದೆ. ಹೀಗೆ ಲೋಕ ಫಲಿತಾಂಶ ಸ್ಥಳೀಯ ಸಂಸ್ಥೆ ಚುನಾವಾಣಾ ಪ್ರಚಾರದಲ್ಲಿಯೂ ಪ್ರತಿಫಲಿಸಲಿದೆಯೇ ಎಂಬ ಕುತೂಹಲ ಮೂಡಿದೆ. ನಗರದಲ್ಲಿ ಎಷ್ಟು ಲೀಡ್ ಸಿಕ್ಕಿದೆ ಎನ್ನುವುದು ಸ್ಥಳೀಯ ಸಂಸ್ಥೆಯ ಚುನಾವಣೆಗೆ ದಿಕ್ಸೂಚಿಯಾಗದೇ ಇದ್ದರೂ ಕೊಂಚ ಪ್ರಭಾವ, ಪರಿಣಾಮವಾಗಬಹುದು ಎಂದು ವಿಶ್ಲೇಷಿಸಲಾಗಿದೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…