ಸುಳ್ಯ: ಲೋಕಸಭಾ ಸಭಾ ಚುನಾವಣೆಯ ಬಿಸಿ ತಣ್ಣಗಾಗುತ್ತಿದ್ದಂತೆ ಸುಳ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಕಾವು ಆರಂಭಗೊಂಡಿತ್ತು. ಇದೀಗ ನಗರ ಪಂಚಾ ಯತ್ ಚುನಾವಣೆಯ ಪ್ರಚಾರದ ಕಾವು ಏರುತ್ತಿದ್ದಂತೆ ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲ ಹೆಚ್ಚಿದೆ.
ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಏರ್ಪಟ್ಟಿತು. ಸುಳ್ಯ ನಗರ ಪಂಚಾಯತ್ ಚುನಾವಣಾ ರಂಗದಲ್ಲಿಯೂ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೇ ನೇರ ಎದುರಾಳಿಗಳು. ಆದುದರಿಂದ ನ.ಪಂ.ಚುನಾವಣೆಯ ಬಿಝಿಯ ಮಧ್ಯೆಯೂ ಲೋಕಸಭಾ ಫಲಿತಾಂಶದ ಮೇಲೆ ಎರಡೂ ಪಕ್ಷಗಳು ಕಣ್ಣಿಟ್ಟಿದೆ. ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಪಕ್ಷಕ್ಕೆ ನ.ಪಂ.ಚುನಾವಣಾ ಪ್ರಚಾರಕ್ಕೆ ಟಾನಿಕ್ ಸಿಕ್ಕಿದಂತಾದರೆ, ಸೋಲುವ ಪಕ್ಷಗಳಿಗೆ ಇನ್ನಷ್ಟು ಜಾಗೃತರಾಗುವ ಮತ್ತು ಪ್ರಚಾರ ತಂತ್ರವನ್ನು ಬದಲಿಸಿ ಕಣದಲ್ಲಿ ಮುಂದುವರಿಯುವ ಅವಕಾಶ ಸಿಕ್ಕಿದಂತಾಗುತ್ತದೆ. ಹೀಗೆ ಲೋಕ ಫಲಿತಾಂಶ ಸ್ಥಳೀಯ ಸಂಸ್ಥೆ ಚುನಾವಾಣಾ ಪ್ರಚಾರದಲ್ಲಿಯೂ ಪ್ರತಿಫಲಿಸಲಿದೆಯೇ ಎಂಬ ಕುತೂಹಲ ಮೂಡಿದೆ. ನಗರದಲ್ಲಿ ಎಷ್ಟು ಲೀಡ್ ಸಿಕ್ಕಿದೆ ಎನ್ನುವುದು ಸ್ಥಳೀಯ ಸಂಸ್ಥೆಯ ಚುನಾವಣೆಗೆ ದಿಕ್ಸೂಚಿಯಾಗದೇ ಇದ್ದರೂ ಕೊಂಚ ಪ್ರಭಾವ, ಪರಿಣಾಮವಾಗಬಹುದು ಎಂದು ವಿಶ್ಲೇಷಿಸಲಾಗಿದೆ.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…