Advertisement
ಸುದ್ದಿಗಳು

ಸುಳ್ಯ ನ.ಪಂ.ಚುನಾವಣೆ: ಪ್ರಥಮ ದಿನ ನಾಮಪತ್ರ ಸಲ್ಲಿಕೆ ಇಲ್ಲ

Share

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಆರಂಭಗೊಂಡಿದೆ. ಸುಳ್ಯ ನಗರ ಪಂಚಾಯತ್ ನಲ್ಲಿ ಚುನಾವಣಾಧಿಕಾರಿಗಳ ಕಚೇರಿ ತೆರೆಯಲಾಗಿದೆ. ಬುಧವಾರ ನಾಮಪತ್ರ ಸಲ್ಲಿಸಲು ಹಲವು ಮಂದಿ ಅರ್ಜಿಗಳನ್ನು ಪಡೆದು ಕೊಂಡು ಹೋಗುತ್ತಿದ್ದರು. ಪ್ರಥಮ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

ಏನೇನು ದಾಖಲೆ ಬೇಕು:

ನಾಮ ಪತ್ರ ಸಲ್ಲಿಸುವ ಅಭ್ಯರ್ಥಿಗಳು ಈ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.
ನಾಮಪತ್ರ -1 ಪ್ರತಿ, ಘೋಷಣಾ ಪತ್ರ -2 ಮೂಲಪ್ರತಿ, ಒಂದು ಜೆರಾಕ್ಸ್ ಪ್ರತಿ(ರೂ.20 ಸ್ಟಾಂಪ್ ಪೇಪರ್ ನಲ್ಲಿ), ಮೀಸಲು ಕ್ಷೇತ್ರವಾದರೆ ಜಾತಿ ಪ್ರಮಾಣ ಪತ್ರ, 3 ಭಾವಚಿತ್ರಗಳು, ಮಾದರಿ ಸಹಿ ಇರುವ ಪ್ರ‌ಮಾಣಪತ್ರ, ಪಕ್ಷದಿಂದ ಸ್ಪರ್ಧಿಸುವುದಾದರೆ ‘ಬಿ’ ಫಾರ್ಮ್, ಪಕ್ಷೇತರನಾಗಿ ಸ್ಪರ್ಧಿಸುವುದಾದರೆ ‘ಸಿ’ಫಾರ್ಮ್ ಸಲ್ಲಿಸಬೇಕು. ಠೇವಣಿ ಸಾಮಾನ್ಯ ಕ್ಷೇತ್ರಕ್ಕೆ ರೂ.1000, ಹಿಂದುಳಿದ ವರ್ಗ, ಅನುಸೂಚಿತ ಜಾತಿ, ಅನುಸೂಚಿತ ಪಂಗಡ,ಮಹಿಳೆ ಆದರೆ ರೂ.500 ಪಾವತಿಸಬೇಕು. ನಾಮಪತ್ರದಲ್ಲಿ ಮುದ್ರಿಸಬೇಕಾದ ಹೆಸರಿನ ವಿವರ ಪತ್ರ ಸಲ್ಲಿಸಬೇಕು.

ಆಯಾ ವಾರ್ಡಿನ ಸೂಚಕರು:

ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ಯಾಗಿದ್ದಲ್ಲಿ ಒಬ್ಬರು ಸೂಚಕರು, ಪಕ್ಷೇತರ ಅಭ್ಯರ್ಥಿ ಯಾಗಿದ್ದಲ್ಲಿ ಮೂರು ಜನ ಸೂಚಕರು ಬೇಕು. ಅಭ್ಯರ್ಥಿಗೆ ಯಾವ ವಾರ್ಡಿನಲ್ಲಿ ಬೇಕಾದರೂ ಸ್ಪರ್ಧಿಸಬಹುದು ಆದರೆ ಸೂಚಕರು ಆಯಾ ವಾರ್ಡಿನವರೇ ಇರಬೇಕು.
ಪ್ರಮಾಣ ಪತ್ರವನ್ನು ಚುನಾವಣಾಧಿಕಾರಿಗಳಿಂದ ಪಡೆದು ಪ್ರಮಾಣಪತ್ರದ ಶುಲ್ಕ ನೀಡಿ ಬ್ಯಾಂಕ್ ಗಳಿಂದ ಪಡೆದ ದಸ್ತಾವೇಜು ಹಾಳೆಯಲ್ಲಿ ಪ್ರಮಾಣೀಕರಿಸಬೇಕು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

9 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

16 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

16 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

16 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

1 day ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

1 day ago