Advertisement
Political mirror

ಸುಳ್ಯ ನ ಪಂ : ಪ್ರಾಬಲ್ಯ ಮೆರೆದ ಪಕ್ಷೇತರರು

Share

ಸುಳ್ಯ:  ಸುಳ್ಯ ನಗರ ಪಂಚಾಯತ್ ನ 20 ವಾರ್ಡ್ ಗಳ ಪೈಕಿ ಎರಡು ಮಂದಿ ಪಕ್ಷೇತರ ಅಭ್ಯರ್ಥಿಗಳು ಗೆಲ್ಲುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

10 ಮಂದಿ ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧೆ ಮಾಡುವ ಮೂಲಕ ಈ ಬಾರಿ ಹಲವು ವಾರ್ಡ್ ಗಳಲ್ಲಿ ತ್ರಿಕೋನ ಸ್ಪರ್ಧೆಯ ರಂಗು ತಂದಿತ್ತು. ತೀವ್ರ ಕುತೂಹಲ ಕೆರಳಿಸಿದ್ದ 17ನೇ ವಾರ್ಡ್ ಬೋರುಗುಡ್ಡೆ ಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ ಕೆ.ಎಸ್.ಉಮ್ಮರ್(ಬಿ.ಉಮ್ಮರ್) ಮತ್ತು 13ನೇ ವಾರ್ಡ್ ಬೂಡುವಿನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ ರಿಯಾಝ್ ಕಟ್ಟೆಕ್ಕಾರ್ ಗೆಲುವಿನ ನಗೆ ಬೀರಿದ್ದಾರೆ. ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯ ನಾಗಿದ್ದ ಉಮ್ಮರ್ ಈ ಬಾರಿ ಪಕ್ಷೇತರನಾಗಿ ಸ್ಪರ್ಧೆಗಿಳಿದಿದ್ದರು. ಕಾಂಗ್ರೆಸ್‌ ನ ಕೆ.ಎಂ.ಮುಸ್ತಫಾ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಆರ್.ಕೆ.ಮಹಮ್ಮದ್, ಬಿಜೆಪಿ ಅಭ್ಯರ್ಥಿ ರಂಜಿತ್ ಪೂಜಾರಿ ಒಡ್ಡಿದ ಚತಷ್ಕೋನ ಸ್ಪರ್ಧೆ ಯನ್ನು ಎದುರಿಸಿ ಉಮ್ಮರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕಳೆದ ಬಾರಿ ಸದಸ್ಯರಾಗಿದ್ದ ಸಂದರ್ಭದಲ್ಲಿ ತನ್ನ ವಾರ್ಡ್ ನಲ್ಲಿ ನಡೆಸಿದ ಅಭಿವೃದ್ಧಿ ಮತ್ತು ಹೋರಾಟಗಳು ವಾರ್ಡ್ ಬದಲಾದರೂ ಮತದಾರ ಉಮ್ಮರ್ ಕೈ ಹಿಡಿಯಲು ಸಹಕಾರಿಯಾಯಿತು ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಿಯಾಝ್ ಕಟ್ಟೆಕ್ಕಾರ್ ಪಕ್ಚೇತರನಾಗಿ ಸ್ಪರ್ಧಿಸಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿ ಗಳನ್ನು ಪರಾಭವಗೊಳಿಸಿ ಗೆಲುವಿನ ನಗೆ ಬೀರಿದರು. ಕಳೆದ ಒಂದು ವರ್ಷದಿಂದ ವಾರ್ಡ್ ನಲ್ಲಿ ಸಕ್ರೀಯನಾಗಿ ಜನಪರ ಸೇವೆಯಲ್ಲಿ ತೊಡಗಿದ್ದ ರಿಯಾಝ್ ಗೆ ಮತದಾರ ಬೆಂಬಲ ಸೂಚಿಸುವ ಮೂಲಕ ಅನಿರೀಕ್ಷಿತ ಫಲಿತಾಂಶ ಬಂದಿದೆ. ಇನ್ನುಳಿದಂತೆ ಪಕ್ಷೇತರರಾಗಿ  19ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಮೋಹಿನಿ 140 ಮತ ಮತ್ತು ಆರನೇ ವಾರ್ಡ್ ಬೀರಮಂಗಲ ದಲ್ಲಿ ಸ್ಲರ್ಧಿಸಿದ್ದ ಅಬ್ದುಲ್ ರಹಿಮಾನ್ 30 ಮತ ಪಡೆದರೆ ಉಳಿದ ಕಡೆ ಪಕ್ಷೇತರ ಅಭ್ಯರ್ಥಿಗಳು ಯಾವುದೇ ಪ್ರಭಾವ ಬೀರಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

7 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

20 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago