Advertisement
Political mirror

ಸುಳ್ಯ ನ ಪಂ : ಪ್ರಾಬಲ್ಯ ಮೆರೆದ ಪಕ್ಷೇತರರು

Share

ಸುಳ್ಯ:  ಸುಳ್ಯ ನಗರ ಪಂಚಾಯತ್ ನ 20 ವಾರ್ಡ್ ಗಳ ಪೈಕಿ ಎರಡು ಮಂದಿ ಪಕ್ಷೇತರ ಅಭ್ಯರ್ಥಿಗಳು ಗೆಲ್ಲುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

10 ಮಂದಿ ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧೆ ಮಾಡುವ ಮೂಲಕ ಈ ಬಾರಿ ಹಲವು ವಾರ್ಡ್ ಗಳಲ್ಲಿ ತ್ರಿಕೋನ ಸ್ಪರ್ಧೆಯ ರಂಗು ತಂದಿತ್ತು. ತೀವ್ರ ಕುತೂಹಲ ಕೆರಳಿಸಿದ್ದ 17ನೇ ವಾರ್ಡ್ ಬೋರುಗುಡ್ಡೆ ಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ ಕೆ.ಎಸ್.ಉಮ್ಮರ್(ಬಿ.ಉಮ್ಮರ್) ಮತ್ತು 13ನೇ ವಾರ್ಡ್ ಬೂಡುವಿನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ ರಿಯಾಝ್ ಕಟ್ಟೆಕ್ಕಾರ್ ಗೆಲುವಿನ ನಗೆ ಬೀರಿದ್ದಾರೆ. ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯ ನಾಗಿದ್ದ ಉಮ್ಮರ್ ಈ ಬಾರಿ ಪಕ್ಷೇತರನಾಗಿ ಸ್ಪರ್ಧೆಗಿಳಿದಿದ್ದರು. ಕಾಂಗ್ರೆಸ್‌ ನ ಕೆ.ಎಂ.ಮುಸ್ತಫಾ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಆರ್.ಕೆ.ಮಹಮ್ಮದ್, ಬಿಜೆಪಿ ಅಭ್ಯರ್ಥಿ ರಂಜಿತ್ ಪೂಜಾರಿ ಒಡ್ಡಿದ ಚತಷ್ಕೋನ ಸ್ಪರ್ಧೆ ಯನ್ನು ಎದುರಿಸಿ ಉಮ್ಮರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕಳೆದ ಬಾರಿ ಸದಸ್ಯರಾಗಿದ್ದ ಸಂದರ್ಭದಲ್ಲಿ ತನ್ನ ವಾರ್ಡ್ ನಲ್ಲಿ ನಡೆಸಿದ ಅಭಿವೃದ್ಧಿ ಮತ್ತು ಹೋರಾಟಗಳು ವಾರ್ಡ್ ಬದಲಾದರೂ ಮತದಾರ ಉಮ್ಮರ್ ಕೈ ಹಿಡಿಯಲು ಸಹಕಾರಿಯಾಯಿತು ಎಂದು ಹೇಳಲಾಗುತ್ತಿದೆ.

Advertisement

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಿಯಾಝ್ ಕಟ್ಟೆಕ್ಕಾರ್ ಪಕ್ಚೇತರನಾಗಿ ಸ್ಪರ್ಧಿಸಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿ ಗಳನ್ನು ಪರಾಭವಗೊಳಿಸಿ ಗೆಲುವಿನ ನಗೆ ಬೀರಿದರು. ಕಳೆದ ಒಂದು ವರ್ಷದಿಂದ ವಾರ್ಡ್ ನಲ್ಲಿ ಸಕ್ರೀಯನಾಗಿ ಜನಪರ ಸೇವೆಯಲ್ಲಿ ತೊಡಗಿದ್ದ ರಿಯಾಝ್ ಗೆ ಮತದಾರ ಬೆಂಬಲ ಸೂಚಿಸುವ ಮೂಲಕ ಅನಿರೀಕ್ಷಿತ ಫಲಿತಾಂಶ ಬಂದಿದೆ. ಇನ್ನುಳಿದಂತೆ ಪಕ್ಷೇತರರಾಗಿ  19ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಮೋಹಿನಿ 140 ಮತ ಮತ್ತು ಆರನೇ ವಾರ್ಡ್ ಬೀರಮಂಗಲ ದಲ್ಲಿ ಸ್ಲರ್ಧಿಸಿದ್ದ ಅಬ್ದುಲ್ ರಹಿಮಾನ್ 30 ಮತ ಪಡೆದರೆ ಉಳಿದ ಕಡೆ ಪಕ್ಷೇತರ ಅಭ್ಯರ್ಥಿಗಳು ಯಾವುದೇ ಪ್ರಭಾವ ಬೀರಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

20 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

23 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

24 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago