ಸುಳ್ಯ: ಸುಳ್ಯ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮತ್ತೆ ಕುಸಿದಿದೆ. ಕಳೆದ ಬಾರಿ 18 ಸ್ಥಾನಗಳಿದ್ದ ಸಂದರ್ಭದಲ್ಲಿ 5 ಸ್ಥಾನ ಪಡೆದಿದ್ದ ಕಾಂಗ್ರೆಸ್ ವಾರ್ಡ್ ಗಳ ಸಂಖ್ಯೆ 20 ಕ್ಕೆ ಏರಿದಾಗ ಕೇವಲ ನಾಲ್ಕು ಸ್ಥಾನಗಳಿಗೆ ತೃಪ್ತಿ ಪಡಬೇಕಾಗಿ ಬಂದಿದೆ.
ಆರು ಮಂದಿ ಮಾಜಿ ಸದಸ್ಯರು ಸ್ಪರ್ಧೆ ಮಾಡಿದಲ್ಲಿ ಒಬ್ಬರು ಮಾತ್ರ ಗೆದ್ದಿದ್ದಾರೆ. ಎಂ.ವೆಂಕಪ್ಪ ಗೌಡ 12ನೇ ವಾರ್ಡ್ ನಿಂದ ಗೆಲುವು ಸಾಧಿಸಿದ್ದರೆ ಸ್ಪರ್ಧಿಸಿದ ಮಾಜಿ ಸದಸ್ಯರಲ್ಲಿ ಕೆ.ಎಂ.ಮುಸ್ತಫಾ, ಪ್ರೇಮ ಟೀಚರ್, ಕೆ.ಗೋಕುಲ್ ದಾಸ್, ಜೂಲಿಯಾ ಕ್ರಾಸ್ತಾ, ಶ್ರೀಲತಾ ಪ್ರಸನ್ನ ಸೋಲು ಕಂಡಿದ್ದಾರೆ. 14 ಮಂದಿ ಹೊಸಬರಿಗೆ ಟಿಕೆಟ್ ನೀಡಲಾಗಿತ್ತು. ಇದರಲ್ಲಿ ಮೂರನೇ ವಾರ್ಡ್ ನಿಂದ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್ ಕೊಡೆಂಕೇರಿ, 6ನೇ ವಾರ್ಡ್ ನಿಂದ ಧೀರಾ ಕ್ರಾಸ್ತಾ, 15ನೇ ವಾರ್ಡ್ ನಿಂದ ಮಹಮ್ಮದ್ ಶರೀಫ್ ಕಂಠಿ ಗೆಲುವು ಸಾಧಿಸಿದ್ದಾರೆ. ಉಳಿದ 11ಮಂದಿ ಪರಾಭವಗೊಂಡರು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…