ಸುಳ್ಯ-ಪಾಣತ್ತೂರು ರಸ್ತೆ: ಕೇರಳದ ಭಾಗದ ಅಭಿವೃದ್ಧಿಗೆ ಮತ್ತೆ 3.80 ಕೋಟಿ ರೂಪಾಯಿ

August 22, 2019
9:32 AM

ಸುಳ್ಯ: ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಕೇರಳದ ಭಾಗದ ಅಭಿವೃದ್ಧಿಗೆ ಮತ್ತೆ 3.80 ಕೋಟಿ ರೂ ಅನುದಾನ ಮಂಜೂರಾಗಿದೆ. ಕಾಸರಗೋಡು ಅಭಿವೃದ್ಧಿ ಯೋಜನೆಯಡಿ ಸರಕಾರ ಅನುದಾನ ಬಿಡುಗಡೆ ಮಾಡಿದ್ದು ಇದಕ್ಕೆ ಆಡಳಿತಾತ್ಮಕ ಮಂಜೂರಾತಿ ದೊರಕಿದೆ ಎಂದು ಪನತ್ತಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿ.ಜಿ.ಮೋಹನನ್ ತಿಳಿಸಿದ್ದಾರೆ.

ಸುಳ್ಯ-ಪಾಣತ್ತೂರು ರಸ್ತೆ ಒಟ್ಟು 20 ಕಿ.ಮಿ. ಇದೆ. ರಸ್ತೆಯಲ್ಲಿ ಪಾಣತ್ತೂರಿನಿಂದ ಕೇರಳ ಗಡಿ ಬಾಟೋಳಿವರೆಗೆ ಕೇರಳದ ಭಾಗ 10 ಕಿ.ಮಿ.ಇದ್ದು ರಸ್ತೆಯಲ್ಲಿ ಕಲ್ಲಪಳ್ಳಿಯಲ್ಲಿ 6ನೇ ಕಿ.ಮಿಯಿಂದ 10 ನೇ ಕಿ.ಮಿ.ವರೆಗೆ 4 ಕಿ.ಮಿ 3.80 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಆಗಲಿದೆ. ಮಳೆಗಾಲ ಕಳೆದ ಬಳಿಕ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ. ಇದೇ ರಸ್ತೆಯಲ್ಲಿ ಕೇರಳದ ಭಾಗದಲ್ಲಿ ಕಳೆದ ಬೇಸಿಗೆಯಲ್ಲಿ ಮೂರು ಕೋಟಿ ರೂ ಅನುದಾನದಲ್ಲಿ 3 ಕಿ.ಮಿ.ರಸ್ತೆ ಅಭಿವೃದ್ಧಿ ಪಡಿಸಲಾಗಿತ್ತು.

ಮಡಿಕೇರಿಗೆ ಪರ್ಯಾಯ ರಸ್ತೆ:ಸುಳ್ಯ-ಪಾಣತ್ತೂರು ರಸ್ತೆಯಲ್ಲಿ ಈ ಕಾಮಗಾರಿ ಪೂರ್ತಿಯಾದರೆ ಕೇರಳದ ಭಾಗ ಬಹುತೇಕ ಅಭಿವೃದ್ಧಿಯಾಗಲಿದೆ. ಕರ್ನಾಟಕದ ಭಾಗ 10 ಕಿ.ಮಿ.ರಸ್ತೆ ಡಾಮರೀಕರಣ ಕಂಡಿದ್ದರೂ ಹೊಂಡ ಗುಂಡಿಗಳಿಂದ ಕೂಡಿದ್ದು ಸಂಚಾರಕ್ಕೆ ದುಸ್ತರವಾಗಿದೆ. ಕರ್ನಾಟಕದ ಭಾಗದ ದುರಸ್ತಿಗೆ 25 ಲಕ್ಷ ಮಂಜೂರಾಗಿದ್ದರೂ ಕಾಮಗಾರಿ ನಡೆಸಿಲ್ಲ.
ಸುಳ್ಯ-ಮಡಿಕೇರಿ ರಸ್ತೆಗೆ ಪರ್ಯಾಯ ಈ ರಸ್ತೆ. ಸುಳ್ಯ-ಪಾಣತ್ತೂರು-ಕರಿಕೆ ಭಾಗಮಂಡಲ ಮೂಲಕ ಮಡಿಕೇರಿಗೆ ಹೋಗಬಹುದು. ಕಳೆದ ವರ್ಷ ಮಳೆಗಾಲದಲ್ಲಿ ಸುಳ್ಯ- ಮಡಿಕೇರಿ ರಸ್ತೆ ಮುಚ್ಚಿದ ಸಂದರ್ಭದಲ್ಲಿ ಪರ್ಯಾಯವಾಗಿ ಈ ರಸ್ತೆಯನ್ನು ಬಳಸಿಕೊಳ್ಳಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror