ಸುದ್ದಿಗಳು

ಸುಳ್ಯ-ಪಾಣತ್ತೂರು ರಸ್ತೆ: ಕೇರಳದ ಭಾಗದ ಅಭಿವೃದ್ಧಿಗೆ ಮತ್ತೆ 3.80 ಕೋಟಿ ರೂಪಾಯಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಕೇರಳದ ಭಾಗದ ಅಭಿವೃದ್ಧಿಗೆ ಮತ್ತೆ 3.80 ಕೋಟಿ ರೂ ಅನುದಾನ ಮಂಜೂರಾಗಿದೆ. ಕಾಸರಗೋಡು ಅಭಿವೃದ್ಧಿ ಯೋಜನೆಯಡಿ ಸರಕಾರ ಅನುದಾನ ಬಿಡುಗಡೆ ಮಾಡಿದ್ದು ಇದಕ್ಕೆ ಆಡಳಿತಾತ್ಮಕ ಮಂಜೂರಾತಿ ದೊರಕಿದೆ ಎಂದು ಪನತ್ತಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿ.ಜಿ.ಮೋಹನನ್ ತಿಳಿಸಿದ್ದಾರೆ.

Advertisement

ಸುಳ್ಯ-ಪಾಣತ್ತೂರು ರಸ್ತೆ ಒಟ್ಟು 20 ಕಿ.ಮಿ. ಇದೆ. ರಸ್ತೆಯಲ್ಲಿ ಪಾಣತ್ತೂರಿನಿಂದ ಕೇರಳ ಗಡಿ ಬಾಟೋಳಿವರೆಗೆ ಕೇರಳದ ಭಾಗ 10 ಕಿ.ಮಿ.ಇದ್ದು ರಸ್ತೆಯಲ್ಲಿ ಕಲ್ಲಪಳ್ಳಿಯಲ್ಲಿ 6ನೇ ಕಿ.ಮಿಯಿಂದ 10 ನೇ ಕಿ.ಮಿ.ವರೆಗೆ 4 ಕಿ.ಮಿ 3.80 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಆಗಲಿದೆ. ಮಳೆಗಾಲ ಕಳೆದ ಬಳಿಕ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ. ಇದೇ ರಸ್ತೆಯಲ್ಲಿ ಕೇರಳದ ಭಾಗದಲ್ಲಿ ಕಳೆದ ಬೇಸಿಗೆಯಲ್ಲಿ ಮೂರು ಕೋಟಿ ರೂ ಅನುದಾನದಲ್ಲಿ 3 ಕಿ.ಮಿ.ರಸ್ತೆ ಅಭಿವೃದ್ಧಿ ಪಡಿಸಲಾಗಿತ್ತು.

ಮಡಿಕೇರಿಗೆ ಪರ್ಯಾಯ ರಸ್ತೆ:ಸುಳ್ಯ-ಪಾಣತ್ತೂರು ರಸ್ತೆಯಲ್ಲಿ ಈ ಕಾಮಗಾರಿ ಪೂರ್ತಿಯಾದರೆ ಕೇರಳದ ಭಾಗ ಬಹುತೇಕ ಅಭಿವೃದ್ಧಿಯಾಗಲಿದೆ. ಕರ್ನಾಟಕದ ಭಾಗ 10 ಕಿ.ಮಿ.ರಸ್ತೆ ಡಾಮರೀಕರಣ ಕಂಡಿದ್ದರೂ ಹೊಂಡ ಗುಂಡಿಗಳಿಂದ ಕೂಡಿದ್ದು ಸಂಚಾರಕ್ಕೆ ದುಸ್ತರವಾಗಿದೆ. ಕರ್ನಾಟಕದ ಭಾಗದ ದುರಸ್ತಿಗೆ 25 ಲಕ್ಷ ಮಂಜೂರಾಗಿದ್ದರೂ ಕಾಮಗಾರಿ ನಡೆಸಿಲ್ಲ.
ಸುಳ್ಯ-ಮಡಿಕೇರಿ ರಸ್ತೆಗೆ ಪರ್ಯಾಯ ಈ ರಸ್ತೆ. ಸುಳ್ಯ-ಪಾಣತ್ತೂರು-ಕರಿಕೆ ಭಾಗಮಂಡಲ ಮೂಲಕ ಮಡಿಕೇರಿಗೆ ಹೋಗಬಹುದು. ಕಳೆದ ವರ್ಷ ಮಳೆಗಾಲದಲ್ಲಿ ಸುಳ್ಯ- ಮಡಿಕೇರಿ ರಸ್ತೆ ಮುಚ್ಚಿದ ಸಂದರ್ಭದಲ್ಲಿ ಪರ್ಯಾಯವಾಗಿ ಈ ರಸ್ತೆಯನ್ನು ಬಳಸಿಕೊಳ್ಳಲಾಗಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

5 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

5 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

6 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

16 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago