Advertisement
ಸುದ್ದಿಗಳು

ಸುಳ್ಯ-ಪಾಣತ್ತೂರು ರಸ್ತೆ: ಕೇರಳದ ಭಾಗದ ಅಭಿವೃದ್ಧಿಗೆ ಮತ್ತೆ 3.80 ಕೋಟಿ ರೂಪಾಯಿ

Share

ಸುಳ್ಯ: ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಕೇರಳದ ಭಾಗದ ಅಭಿವೃದ್ಧಿಗೆ ಮತ್ತೆ 3.80 ಕೋಟಿ ರೂ ಅನುದಾನ ಮಂಜೂರಾಗಿದೆ. ಕಾಸರಗೋಡು ಅಭಿವೃದ್ಧಿ ಯೋಜನೆಯಡಿ ಸರಕಾರ ಅನುದಾನ ಬಿಡುಗಡೆ ಮಾಡಿದ್ದು ಇದಕ್ಕೆ ಆಡಳಿತಾತ್ಮಕ ಮಂಜೂರಾತಿ ದೊರಕಿದೆ ಎಂದು ಪನತ್ತಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿ.ಜಿ.ಮೋಹನನ್ ತಿಳಿಸಿದ್ದಾರೆ.

ಸುಳ್ಯ-ಪಾಣತ್ತೂರು ರಸ್ತೆ ಒಟ್ಟು 20 ಕಿ.ಮಿ. ಇದೆ. ರಸ್ತೆಯಲ್ಲಿ ಪಾಣತ್ತೂರಿನಿಂದ ಕೇರಳ ಗಡಿ ಬಾಟೋಳಿವರೆಗೆ ಕೇರಳದ ಭಾಗ 10 ಕಿ.ಮಿ.ಇದ್ದು ರಸ್ತೆಯಲ್ಲಿ ಕಲ್ಲಪಳ್ಳಿಯಲ್ಲಿ 6ನೇ ಕಿ.ಮಿಯಿಂದ 10 ನೇ ಕಿ.ಮಿ.ವರೆಗೆ 4 ಕಿ.ಮಿ 3.80 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಆಗಲಿದೆ. ಮಳೆಗಾಲ ಕಳೆದ ಬಳಿಕ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ. ಇದೇ ರಸ್ತೆಯಲ್ಲಿ ಕೇರಳದ ಭಾಗದಲ್ಲಿ ಕಳೆದ ಬೇಸಿಗೆಯಲ್ಲಿ ಮೂರು ಕೋಟಿ ರೂ ಅನುದಾನದಲ್ಲಿ 3 ಕಿ.ಮಿ.ರಸ್ತೆ ಅಭಿವೃದ್ಧಿ ಪಡಿಸಲಾಗಿತ್ತು.

ಮಡಿಕೇರಿಗೆ ಪರ್ಯಾಯ ರಸ್ತೆ:ಸುಳ್ಯ-ಪಾಣತ್ತೂರು ರಸ್ತೆಯಲ್ಲಿ ಈ ಕಾಮಗಾರಿ ಪೂರ್ತಿಯಾದರೆ ಕೇರಳದ ಭಾಗ ಬಹುತೇಕ ಅಭಿವೃದ್ಧಿಯಾಗಲಿದೆ. ಕರ್ನಾಟಕದ ಭಾಗ 10 ಕಿ.ಮಿ.ರಸ್ತೆ ಡಾಮರೀಕರಣ ಕಂಡಿದ್ದರೂ ಹೊಂಡ ಗುಂಡಿಗಳಿಂದ ಕೂಡಿದ್ದು ಸಂಚಾರಕ್ಕೆ ದುಸ್ತರವಾಗಿದೆ. ಕರ್ನಾಟಕದ ಭಾಗದ ದುರಸ್ತಿಗೆ 25 ಲಕ್ಷ ಮಂಜೂರಾಗಿದ್ದರೂ ಕಾಮಗಾರಿ ನಡೆಸಿಲ್ಲ.
ಸುಳ್ಯ-ಮಡಿಕೇರಿ ರಸ್ತೆಗೆ ಪರ್ಯಾಯ ಈ ರಸ್ತೆ. ಸುಳ್ಯ-ಪಾಣತ್ತೂರು-ಕರಿಕೆ ಭಾಗಮಂಡಲ ಮೂಲಕ ಮಡಿಕೇರಿಗೆ ಹೋಗಬಹುದು. ಕಳೆದ ವರ್ಷ ಮಳೆಗಾಲದಲ್ಲಿ ಸುಳ್ಯ- ಮಡಿಕೇರಿ ರಸ್ತೆ ಮುಚ್ಚಿದ ಸಂದರ್ಭದಲ್ಲಿ ಪರ್ಯಾಯವಾಗಿ ಈ ರಸ್ತೆಯನ್ನು ಬಳಸಿಕೊಳ್ಳಲಾಗಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

8 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

16 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

23 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago