(ಸಾಂದರ್ಭಿಕ ಚಿತ್ರ )
ಸುಳ್ಯ: ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಕೇರಳದ ಭಾಗದ ಅಭಿವೃದ್ಧಿಗೆ ಮತ್ತೆ 3.80 ಕೋಟಿ ರೂ ಅನುದಾನ ಮಂಜೂರಾಗಿದೆ. ಕಾಸರಗೋಡು ಅಭಿವೃದ್ಧಿ ಯೋಜನೆಯಡಿ ಸರಕಾರ ಅನುದಾನ ಬಿಡುಗಡೆ ಮಾಡಿದ್ದು ಇದಕ್ಕೆ ಆಡಳಿತಾತ್ಮಕ ಮಂಜೂರಾತಿ ದೊರಕಿದೆ ಎಂದು ಪನತ್ತಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿ.ಜಿ.ಮೋಹನನ್ ತಿಳಿಸಿದ್ದಾರೆ.
ಸುಳ್ಯ-ಪಾಣತ್ತೂರು ರಸ್ತೆ ಒಟ್ಟು 20 ಕಿ.ಮಿ. ಇದೆ. ರಸ್ತೆಯಲ್ಲಿ ಪಾಣತ್ತೂರಿನಿಂದ ಕೇರಳ ಗಡಿ ಬಾಟೋಳಿವರೆಗೆ ಕೇರಳದ ಭಾಗ 10 ಕಿ.ಮಿ.ಇದ್ದು ರಸ್ತೆಯಲ್ಲಿ ಕಲ್ಲಪಳ್ಳಿಯಲ್ಲಿ 6ನೇ ಕಿ.ಮಿಯಿಂದ 10 ನೇ ಕಿ.ಮಿ.ವರೆಗೆ 4 ಕಿ.ಮಿ 3.80 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಆಗಲಿದೆ. ಮಳೆಗಾಲ ಕಳೆದ ಬಳಿಕ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ. ಇದೇ ರಸ್ತೆಯಲ್ಲಿ ಕೇರಳದ ಭಾಗದಲ್ಲಿ ಕಳೆದ ಬೇಸಿಗೆಯಲ್ಲಿ ಮೂರು ಕೋಟಿ ರೂ ಅನುದಾನದಲ್ಲಿ 3 ಕಿ.ಮಿ.ರಸ್ತೆ ಅಭಿವೃದ್ಧಿ ಪಡಿಸಲಾಗಿತ್ತು.
ಮಡಿಕೇರಿಗೆ ಪರ್ಯಾಯ ರಸ್ತೆ:ಸುಳ್ಯ-ಪಾಣತ್ತೂರು ರಸ್ತೆಯಲ್ಲಿ ಈ ಕಾಮಗಾರಿ ಪೂರ್ತಿಯಾದರೆ ಕೇರಳದ ಭಾಗ ಬಹುತೇಕ ಅಭಿವೃದ್ಧಿಯಾಗಲಿದೆ. ಕರ್ನಾಟಕದ ಭಾಗ 10 ಕಿ.ಮಿ.ರಸ್ತೆ ಡಾಮರೀಕರಣ ಕಂಡಿದ್ದರೂ ಹೊಂಡ ಗುಂಡಿಗಳಿಂದ ಕೂಡಿದ್ದು ಸಂಚಾರಕ್ಕೆ ದುಸ್ತರವಾಗಿದೆ. ಕರ್ನಾಟಕದ ಭಾಗದ ದುರಸ್ತಿಗೆ 25 ಲಕ್ಷ ಮಂಜೂರಾಗಿದ್ದರೂ ಕಾಮಗಾರಿ ನಡೆಸಿಲ್ಲ.
ಸುಳ್ಯ-ಮಡಿಕೇರಿ ರಸ್ತೆಗೆ ಪರ್ಯಾಯ ಈ ರಸ್ತೆ. ಸುಳ್ಯ-ಪಾಣತ್ತೂರು-ಕರಿಕೆ ಭಾಗಮಂಡಲ ಮೂಲಕ ಮಡಿಕೇರಿಗೆ ಹೋಗಬಹುದು. ಕಳೆದ ವರ್ಷ ಮಳೆಗಾಲದಲ್ಲಿ ಸುಳ್ಯ- ಮಡಿಕೇರಿ ರಸ್ತೆ ಮುಚ್ಚಿದ ಸಂದರ್ಭದಲ್ಲಿ ಪರ್ಯಾಯವಾಗಿ ಈ ರಸ್ತೆಯನ್ನು ಬಳಸಿಕೊಳ್ಳಲಾಗಿತ್ತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…