(ಸಾಂದರ್ಭಿಕ ಚಿತ್ರ )
ಸುಳ್ಯ: ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಕೇರಳದ ಭಾಗದ ಅಭಿವೃದ್ಧಿಗೆ ಮತ್ತೆ 3.80 ಕೋಟಿ ರೂ ಅನುದಾನ ಮಂಜೂರಾಗಿದೆ. ಕಾಸರಗೋಡು ಅಭಿವೃದ್ಧಿ ಯೋಜನೆಯಡಿ ಸರಕಾರ ಅನುದಾನ ಬಿಡುಗಡೆ ಮಾಡಿದ್ದು ಇದಕ್ಕೆ ಆಡಳಿತಾತ್ಮಕ ಮಂಜೂರಾತಿ ದೊರಕಿದೆ ಎಂದು ಪನತ್ತಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿ.ಜಿ.ಮೋಹನನ್ ತಿಳಿಸಿದ್ದಾರೆ.
ಸುಳ್ಯ-ಪಾಣತ್ತೂರು ರಸ್ತೆ ಒಟ್ಟು 20 ಕಿ.ಮಿ. ಇದೆ. ರಸ್ತೆಯಲ್ಲಿ ಪಾಣತ್ತೂರಿನಿಂದ ಕೇರಳ ಗಡಿ ಬಾಟೋಳಿವರೆಗೆ ಕೇರಳದ ಭಾಗ 10 ಕಿ.ಮಿ.ಇದ್ದು ರಸ್ತೆಯಲ್ಲಿ ಕಲ್ಲಪಳ್ಳಿಯಲ್ಲಿ 6ನೇ ಕಿ.ಮಿಯಿಂದ 10 ನೇ ಕಿ.ಮಿ.ವರೆಗೆ 4 ಕಿ.ಮಿ 3.80 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಆಗಲಿದೆ. ಮಳೆಗಾಲ ಕಳೆದ ಬಳಿಕ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ. ಇದೇ ರಸ್ತೆಯಲ್ಲಿ ಕೇರಳದ ಭಾಗದಲ್ಲಿ ಕಳೆದ ಬೇಸಿಗೆಯಲ್ಲಿ ಮೂರು ಕೋಟಿ ರೂ ಅನುದಾನದಲ್ಲಿ 3 ಕಿ.ಮಿ.ರಸ್ತೆ ಅಭಿವೃದ್ಧಿ ಪಡಿಸಲಾಗಿತ್ತು.
ಮಡಿಕೇರಿಗೆ ಪರ್ಯಾಯ ರಸ್ತೆ:ಸುಳ್ಯ-ಪಾಣತ್ತೂರು ರಸ್ತೆಯಲ್ಲಿ ಈ ಕಾಮಗಾರಿ ಪೂರ್ತಿಯಾದರೆ ಕೇರಳದ ಭಾಗ ಬಹುತೇಕ ಅಭಿವೃದ್ಧಿಯಾಗಲಿದೆ. ಕರ್ನಾಟಕದ ಭಾಗ 10 ಕಿ.ಮಿ.ರಸ್ತೆ ಡಾಮರೀಕರಣ ಕಂಡಿದ್ದರೂ ಹೊಂಡ ಗುಂಡಿಗಳಿಂದ ಕೂಡಿದ್ದು ಸಂಚಾರಕ್ಕೆ ದುಸ್ತರವಾಗಿದೆ. ಕರ್ನಾಟಕದ ಭಾಗದ ದುರಸ್ತಿಗೆ 25 ಲಕ್ಷ ಮಂಜೂರಾಗಿದ್ದರೂ ಕಾಮಗಾರಿ ನಡೆಸಿಲ್ಲ.
ಸುಳ್ಯ-ಮಡಿಕೇರಿ ರಸ್ತೆಗೆ ಪರ್ಯಾಯ ಈ ರಸ್ತೆ. ಸುಳ್ಯ-ಪಾಣತ್ತೂರು-ಕರಿಕೆ ಭಾಗಮಂಡಲ ಮೂಲಕ ಮಡಿಕೇರಿಗೆ ಹೋಗಬಹುದು. ಕಳೆದ ವರ್ಷ ಮಳೆಗಾಲದಲ್ಲಿ ಸುಳ್ಯ- ಮಡಿಕೇರಿ ರಸ್ತೆ ಮುಚ್ಚಿದ ಸಂದರ್ಭದಲ್ಲಿ ಪರ್ಯಾಯವಾಗಿ ಈ ರಸ್ತೆಯನ್ನು ಬಳಸಿಕೊಳ್ಳಲಾಗಿತ್ತು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…