Advertisement
ಸುದ್ದಿಗಳು

ಸುಳ್ಯ-ಪಾಣತ್ತೂರು ರಸ್ತೆ: ಕೇರಳದ ಭಾಗದ ಅಭಿವೃದ್ಧಿಗೆ ಮತ್ತೆ 3.80 ಕೋಟಿ ರೂಪಾಯಿ

Share

ಸುಳ್ಯ: ಸುಳ್ಯ -ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಕೇರಳದ ಭಾಗದ ಅಭಿವೃದ್ಧಿಗೆ ಮತ್ತೆ 3.80 ಕೋಟಿ ರೂ ಅನುದಾನ ಮಂಜೂರಾಗಿದೆ. ಕಾಸರಗೋಡು ಅಭಿವೃದ್ಧಿ ಯೋಜನೆಯಡಿ ಸರಕಾರ ಅನುದಾನ ಬಿಡುಗಡೆ ಮಾಡಿದ್ದು ಇದಕ್ಕೆ ಆಡಳಿತಾತ್ಮಕ ಮಂಜೂರಾತಿ ದೊರಕಿದೆ ಎಂದು ಪನತ್ತಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿ.ಜಿ.ಮೋಹನನ್ ತಿಳಿಸಿದ್ದಾರೆ.

Advertisement
Advertisement

ಸುಳ್ಯ-ಪಾಣತ್ತೂರು ರಸ್ತೆ ಒಟ್ಟು 20 ಕಿ.ಮಿ. ಇದೆ. ರಸ್ತೆಯಲ್ಲಿ ಪಾಣತ್ತೂರಿನಿಂದ ಕೇರಳ ಗಡಿ ಬಾಟೋಳಿವರೆಗೆ ಕೇರಳದ ಭಾಗ 10 ಕಿ.ಮಿ.ಇದ್ದು ರಸ್ತೆಯಲ್ಲಿ ಕಲ್ಲಪಳ್ಳಿಯಲ್ಲಿ 6ನೇ ಕಿ.ಮಿಯಿಂದ 10 ನೇ ಕಿ.ಮಿ.ವರೆಗೆ 4 ಕಿ.ಮಿ 3.80 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಆಗಲಿದೆ. ಮಳೆಗಾಲ ಕಳೆದ ಬಳಿಕ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ. ಇದೇ ರಸ್ತೆಯಲ್ಲಿ ಕೇರಳದ ಭಾಗದಲ್ಲಿ ಕಳೆದ ಬೇಸಿಗೆಯಲ್ಲಿ ಮೂರು ಕೋಟಿ ರೂ ಅನುದಾನದಲ್ಲಿ 3 ಕಿ.ಮಿ.ರಸ್ತೆ ಅಭಿವೃದ್ಧಿ ಪಡಿಸಲಾಗಿತ್ತು.

Advertisement

ಮಡಿಕೇರಿಗೆ ಪರ್ಯಾಯ ರಸ್ತೆ:ಸುಳ್ಯ-ಪಾಣತ್ತೂರು ರಸ್ತೆಯಲ್ಲಿ ಈ ಕಾಮಗಾರಿ ಪೂರ್ತಿಯಾದರೆ ಕೇರಳದ ಭಾಗ ಬಹುತೇಕ ಅಭಿವೃದ್ಧಿಯಾಗಲಿದೆ. ಕರ್ನಾಟಕದ ಭಾಗ 10 ಕಿ.ಮಿ.ರಸ್ತೆ ಡಾಮರೀಕರಣ ಕಂಡಿದ್ದರೂ ಹೊಂಡ ಗುಂಡಿಗಳಿಂದ ಕೂಡಿದ್ದು ಸಂಚಾರಕ್ಕೆ ದುಸ್ತರವಾಗಿದೆ. ಕರ್ನಾಟಕದ ಭಾಗದ ದುರಸ್ತಿಗೆ 25 ಲಕ್ಷ ಮಂಜೂರಾಗಿದ್ದರೂ ಕಾಮಗಾರಿ ನಡೆಸಿಲ್ಲ.
ಸುಳ್ಯ-ಮಡಿಕೇರಿ ರಸ್ತೆಗೆ ಪರ್ಯಾಯ ಈ ರಸ್ತೆ. ಸುಳ್ಯ-ಪಾಣತ್ತೂರು-ಕರಿಕೆ ಭಾಗಮಂಡಲ ಮೂಲಕ ಮಡಿಕೇರಿಗೆ ಹೋಗಬಹುದು. ಕಳೆದ ವರ್ಷ ಮಳೆಗಾಲದಲ್ಲಿ ಸುಳ್ಯ- ಮಡಿಕೇರಿ ರಸ್ತೆ ಮುಚ್ಚಿದ ಸಂದರ್ಭದಲ್ಲಿ ಪರ್ಯಾಯವಾಗಿ ಈ ರಸ್ತೆಯನ್ನು ಬಳಸಿಕೊಳ್ಳಲಾಗಿತ್ತು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

10 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

17 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

17 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

20 hours ago