ಸುಳ್ಯ: 41 ವರ್ಷಗಳಷ್ಟು ಕಾಲ ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಿ. ಬಾಲಕೃಷ್ಣರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಸುಳ್ಯ ಸಿ.ಎ. ಬ್ಯಾಂಕ್ ಸಭಾ ಭವನದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ಬ್ಯಾಂಕಿನ ಮಾಜಿ ಅಧ್ಯಕ್ಷ ಜಾಕೆ ಮಾಧವ ಗೌಡ ಬಾಲಕೃಷ್ಣ ಮತ್ತು ಕುಸುಮಾವತಿ ದಂಪತಿಗಳನ್ನು ಸನ್ಮಾನಿಸಿದರು. ಕೋಶಾಧಿಕಾರಿ ಬಿ.ಎಸ್.ವಿಶ್ವನಾಥ, ಮಾಜಿ ಅಧ್ಯಕ್ಷ ಪಿ.ಕೆ. ಉಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ದಿನೇಶ್ ಎಂ.ಎಸ್. ದಾಮೋದರ, ಚಂದ್ರಾವತಿ, ನಿವೃತ್ತ ವ್ಯವಸ್ಥಾಪಕ ಶೀನಪ್ಪ ಗೌಡ, ಪುತ್ತೂರು ಪಿ.ಎಲ್.ಡಿ. ಬ್ಯಾಂಕ್ ನಿವೃತ್ತ ಮ್ಯಾನೇಜರ್ ಯಶೋಧರ ಜೈನ್, ಬ್ಯಾಂಕಿನ ಮಾಜಿ ನಿರ್ದೇಶಕ ಶ್ರೀಪತಿ ಭಟ್ ಮಾತನಾಡಿದರು. ಅಶ್ವಿತ್ ಹೆಚ್ ಸನ್ಮಾನ ಪತ್ರ ವಾಚಿಸಿದರು.
ಲತಾ ಪ್ರಾರ್ಥಿಸಿ, ಕ್ಷೇತ್ರಾಧಿಕಾರಿ ಮತ್ತು ಪ್ರಭಾರ ವ್ಯವಸ್ಥಾಪಕರಾದ ಕೆ.ಸಿ. ಧನರಾಜ್ ಸ್ವಾಗತಿಸಿದರು. ಸಿಬ್ಬಂದಿ ಲೋಹಿತ್ ಮಾವಿನಗೊಡ್ಲು ಕಾರ್ಯಕ್ರಮ ನಿರೂಪಿಸಿ, ಬ್ಯಾಂಕಿನ ಉಪಾಧ್ಯಕ್ಷ ಪಿ.ವೇಣುಗೋಪಾಲ ವಂದಿಸಿದರು. ಬ್ಯಾಂಕಿನ ಸಿಬ್ಬಂದಿ ವರ್ಗದವರು, ನಿರ್ದೇಶಕರು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…