ಸುಳ್ಯ: 41 ವರ್ಷಗಳಷ್ಟು ಕಾಲ ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಿ. ಬಾಲಕೃಷ್ಣರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಸುಳ್ಯ ಸಿ.ಎ. ಬ್ಯಾಂಕ್ ಸಭಾ ಭವನದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ಬ್ಯಾಂಕಿನ ಮಾಜಿ ಅಧ್ಯಕ್ಷ ಜಾಕೆ ಮಾಧವ ಗೌಡ ಬಾಲಕೃಷ್ಣ ಮತ್ತು ಕುಸುಮಾವತಿ ದಂಪತಿಗಳನ್ನು ಸನ್ಮಾನಿಸಿದರು. ಕೋಶಾಧಿಕಾರಿ ಬಿ.ಎಸ್.ವಿಶ್ವನಾಥ, ಮಾಜಿ ಅಧ್ಯಕ್ಷ ಪಿ.ಕೆ. ಉಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ದಿನೇಶ್ ಎಂ.ಎಸ್. ದಾಮೋದರ, ಚಂದ್ರಾವತಿ, ನಿವೃತ್ತ ವ್ಯವಸ್ಥಾಪಕ ಶೀನಪ್ಪ ಗೌಡ, ಪುತ್ತೂರು ಪಿ.ಎಲ್.ಡಿ. ಬ್ಯಾಂಕ್ ನಿವೃತ್ತ ಮ್ಯಾನೇಜರ್ ಯಶೋಧರ ಜೈನ್, ಬ್ಯಾಂಕಿನ ಮಾಜಿ ನಿರ್ದೇಶಕ ಶ್ರೀಪತಿ ಭಟ್ ಮಾತನಾಡಿದರು. ಅಶ್ವಿತ್ ಹೆಚ್ ಸನ್ಮಾನ ಪತ್ರ ವಾಚಿಸಿದರು.
ಲತಾ ಪ್ರಾರ್ಥಿಸಿ, ಕ್ಷೇತ್ರಾಧಿಕಾರಿ ಮತ್ತು ಪ್ರಭಾರ ವ್ಯವಸ್ಥಾಪಕರಾದ ಕೆ.ಸಿ. ಧನರಾಜ್ ಸ್ವಾಗತಿಸಿದರು. ಸಿಬ್ಬಂದಿ ಲೋಹಿತ್ ಮಾವಿನಗೊಡ್ಲು ಕಾರ್ಯಕ್ರಮ ನಿರೂಪಿಸಿ, ಬ್ಯಾಂಕಿನ ಉಪಾಧ್ಯಕ್ಷ ಪಿ.ವೇಣುಗೋಪಾಲ ವಂದಿಸಿದರು. ಬ್ಯಾಂಕಿನ ಸಿಬ್ಬಂದಿ ವರ್ಗದವರು, ನಿರ್ದೇಶಕರು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…