ಸುಳ್ಯ: ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ನವೀನ್ ಚಂದ್ರ ಜೋಗಿ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್ ಅಧಿಕಾರ ಹಸ್ತಾಂತರಿಸಿದ್ದಾರೆ.
2.8 ವರ್ಷಗಳ ಕಾಲ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ಸತೀಶ್ ಕುಮಾರ್ ಅವರಿಗೆ ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾವಣೆಯಾಗಿದೆ. ನೂತನ ವೃತ್ತ ನಿರೀಕ್ಷಕರಾಗಿ ರಾಜ್ಯ ಗುಪ್ತವಾರ್ತೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿ ಆಗಮಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ಮೂಲದವರಾದ ನವೀನ್ ಚಂದ್ರ ಜೋಗಿ ಅವರು ಈ ಹಿಂದೆ ಲೋಕಾಯುಕ್ತ, ರಾಜ್ಯ ಗುಪ್ತ ವಾರ್ತೆ,ಉಡುಪಿ ನಗರ ವೃತ್ತಗಳಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ನೂತನ ವೃತ್ತ ನಿರೀಕ್ಷಕರು ಅಧಿಕಾರ ವಹಿಸುವ ಸಂದರ್ಭದಲ್ಲಿ ಸುಳ್ಯ ಆರಕ್ಷಕ ಉಪನಿರೀಕ್ಷಕ ಎಂ.ಆರ್.ಹರೀಶ್, ಅಪರಾಧ ಪತ್ತೆ ವಿಭಾಗದ ಎಸ್.ಐ ರತ್ನಕುಮಾರ್, ಪ್ರೊಬೇಷನರಿ ಎಸ್.ಐ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.
ಸನ್ಮಾನ, ಬೀಳ್ಕೊಡುಗೆ: ಸುಳ್ಯದಿಂದ ವರ್ಗಾವಣೆಯಾಗಿರುವ ವೃತ್ತ ನಿರೀಕ್ಷಕ ಸತೀಶ್ ಕುಮಾರ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಎಡಿಷನಲ್ ಎಸ್ ಪಿ ವಿಕ್ರಂ ಆಮ್ಟೆ ಸನ್ಮಾನ ನೆರವೇರಿಸಿದರು. ಡಿವೈಎಸ್ ಪಿ ದಿನಕರ ಶೆಟ್ಟಿ, ನೂತನ ಸಿಐ ನವೀನ್ ಚಂದ್ರ ಜೋಗಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಸುಳ್ಯದಲ್ಲಿ ತನ್ನ ಕರ್ತವ್ಯದ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಸತೀಶ್ ಕುಮಾರ್ ಕೃತಜ್ಞತೆ ಸಲ್ಲಿಸಿದರು.
ಸತೀಶ್ ಕುಮಾರ್ ಸುದೀರ್ಘ ಸೇವೆ: ಸುಳ್ಯ ವೃತ್ತ ನಿರೀಕ್ಷಕರಾಗಿ 2.8 ವರ್ಷಗಳ ಸುದೀರ್ಘ ಕಾಲ ಕರ್ತವ್ಯ ನಿರ್ವಹಿಸಿದ್ದ ಆರ್.ಸತೀಶ್ ಕುಮಾರ್ ಜನಪರ ಅಧಿಕಾರಿ ಎಂದು ಹೆಸರು ಗಳಿಸಿದ್ದರು. ಸುಳ್ಯದಲ್ಲಿ ಸಿಐ ಆಗಿ ದೀರ್ಘ ಕಾಲ ಸೇವೆ ಸಲ್ಲಿಸಿದವರಲ್ಲಿ ಸತೀಶ್ ಕುಮಾರ್ ಎರಡನೆಯವರಾಗಿದ್ದಾರೆ. ಎಲ್ಲರೊಂದಿಗೂ ಆತ್ಮೀಯರಾಗಿ ಬೆರೆಯುತ್ತಿದ್ದ ಅವರು ರಾಜ್ಯ ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯನ್ನು ಯಶಸ್ವಿಯಾಗಿ ನೀಭಾಯಿಸಿದ್ದರು. ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಗಳನ್ನೊಳಗೊಂಡ ಸುಳ್ಯ ವೃತ್ತದ ನಿರೀಕ್ಷಕರಾಗಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಒತ್ತು ನೀಡಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…