Advertisement
ಸುದ್ದಿಗಳು

ಸುಳ್ಯ: ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಮುಂಗಾರು ಕ್ರೀಡಾಕೂಟ

Share

ಸುಳ್ಯ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ (ಎಸ್.ಕೆ.ಪಿ.ಎ)ಜಿಲ್ಲಾ ವಾರ್ಷಿಕ ಕ್ರೀಡಾಕೂಟ ಆ.18 ರಂದು ಸುಳ್ಯ ಮಹಾತ್ಮಾ ಗಾಂಧಿ ಮಲ್ನಾಡ್ ಹೈಸ್ಕೂಲ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್ ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲೋಕೇಶ್ ಸುಬ್ರಹ್ಮಣ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅಸೋಸಿಯೇಶನ್ ನ ಸುಳ್ಯ ವಲಯದ ಆಶ್ರಯದಲ್ಲಿ ನಡೆಯುವ ಈ ಮುಂಗಾರು ಕ್ರೀಡಾಕೂಟವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸುವರು. ಎಸ್.ಕೆ.ಪಿ.ಎ ಅಧ್ಯಕ್ಷ ವಿಲ್ಸನ್ ಗೋನ್ಸಾಲ್ವಿಸ್ ಅಧ್ಯಕ್ಷತೆ ವಹಿಸುವರು. ಶಾಸಕ ಎಸ್.ಅಂಗಾರ, ಎಸ್.ಕೆ.ಪಿ.ಎ. ಸಂಚಾಲಕ ವಿಠಲ ಚೌಟ, ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಲಯನ್ಸ್ ಕ್ಲಬ್ ಮಾಜಿ ರಾಜ್ಯಪಾಲ ಎಂ.ಬಿ.ಸದಾಶಿವ ಭಾಗವಹಿಸಲಿದ್ದಾರೆ.

ಇದೇ ವೇಳೆ ಅಂತರಾಷ್ಟ್ರೀಯ ಕರಾಟೆ ಪಟು ಪ್ರತೀಕ್ ದೇವ, ರಾಷ್ಟ್ರಮಟ್ಟದ ವೇಟ್ ಲಿಪ್ಟರ್ ಲಾವಣ್ಯ ಆರ್ ರೈ ಅವರನ್ನು ಸನ್ಮಾನಿಸಲಾಗುವುದು. ಉದ್ಘಾಟನೆಗೆ ಮುನ್ನ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಕ್ರೀಡಾ ಕೂಟದ ಮೆರವಣಿಗೆ ನಡೆಯಲಿದೆ. ಪೊಲೀಸ್ ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್ ಉದ್ಘಾಟಿಸುವರು. ಸಂಘದ ಸದಸ್ಯರಿಗೆ ಮತ್ತು ಕುಟುಂಬದವರಿಗಾಗಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್.ಕೆ.ಪಿ.ಎ ಮಾಜಿ ಜಿಲ್ಲಾಧ್ಯಕ್ಷ ಗೋಪಾಲಕೃಷ್ಣ ಸುಳ್ಯ, ಸುಳ್ಯ ವಲಯ ಅಧ್ಯಕ್ಷ ಕರುಣಾಕರ ಎಣ್ಣೆಮಜಲು, ಗೌರವಾಧ್ಯಕ್ಷ ಬಾಲಕೃಷ್ಣ ಗುತ್ತಿಗಾರು, ಉಪಾಧ್ಯಕ್ಷರಾದ ಅನುರಾಜ್ ಪಂಜ, ದಿವಾಕರ ಮುಂಡೋಡಿ, ಕ್ರೀಡಾ ಕಾರ್ಯದರ್ಶಿ ರತೀಶ್ ಬೆಳ್ಳಾರೆ, ದಿನೇಶ್ ಏನೆಕಲ್ಲು, ಹರೀಶ್ ಸುಳ್ಯ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

17 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago