ಸುಳ್ಯ: ಸುಳ್ಯ-ಬಂದಡ್ಕ, ಸುಳ್ಯ-ಪಾಣತ್ತೂರು ಅಂತಾರಾಜ್ಯ ಸಂಪರ್ಕ ಕಲ್ಪಿಸುವ ಸುಳ್ಯ-ಕೋಲ್ಚಾರು, ಸುಳ್ಯ-ಆಲೆಟ್ಟಿ-ಬಡ್ಡಡ್ಕ ರಸ್ತೆಯು ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ದುಸ್ತರವಾಗಿರುವುದನ್ನು ಖಂಡಿಸಿ ಸಾರ್ವಜನಿಕರು ನಾಗಪಟ್ಟಣ ಸೇತುವೆಯ ಬಳಿ ರಸ್ತೆ ತಡೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸಭೆಯನ್ನುದ್ಧೇಶಿಸಿ ಮಾತನಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಈ ಭಾಗದ ರಸ್ತೆಯು ತೀರಾ ಹದಗಟ್ಟಿದ್ದು, ಜನಪ್ರತಿನಿಧಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ. ರಸ್ತೆಯ ನಿರ್ವಹಣೆ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕೆಲಸ ಮಾಡಿಸಬೇಕಾದುದು ಜನಪ್ರತಿನಿಧಿಗಳ ಜವಾಬ್ದಾರಿ. ಆದರೆ ಜನಪ್ರತಿನಿಧಿಗಳು ಅದನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದರು.
ನಗರ ಪಂಚಾಯಿತಿ ಸದಸ್ಯ ಎಂ. ವೆಂಕಪ್ಪ ಗೌಡ ಮಾತನಾಡಿ ಮೂಲಭೂತ ಸೌಕರ್ಯದಿಂದ ವಂಚಿತರಾದಾಗ ರಾಜಕೀಯ ಬದಿಗಿಟ್ಟು ಒಗ್ಗಟ್ಟಾಗಿ ಸೇರಿ ಹೋರಾಟ ನಡೆಸಬೇಕು. ಮುಂದಿನ 15 ದಿನದ ಒಳಗೆ ದುರಸ್ತಿ ಮಾಡದಿದ್ದರೆ ನಗರ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಹೆಳಿದರು. ಆಲೆಟ್ಟಿ ಗ್ರಾ.ಪಂ. ಸದಸ್ಯರಾದ ಗೀತಾ ಕೋಲ್ಚಾರ್, ಜಯಂತಿ ಕೂಟೇಲು, ಯೂಸುಫ್ ಅಂಜಿಕ್ಕಾರ್, ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ, ನ.ಪಂ.ಸದಸ್ಯರಾದ ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ಮಾಜಿ ಸದಸ್ಯ ಕೆ.ಎಂ.ಮುಸ್ತಪಾ, ಪ್ರಮುಖರಾದ ತೇಜುಕುಮಾರ್ ಬಡ್ಡಡ್ಕ, ಆರ್.ಕೆ.ಮಹಮ್ಮದ್, ಧರ್ಮಪಾಲ ಕೊಯಿಂಗಾಜೆ, ಬಾಪೂ ಸಾಹೇಬ್, ದಾಮೋದರ ಗೌಡ ನಾರ್ಕೋಡು, ಚಂದ್ರಕಾಂತ ನಾರ್ಕೋಡು, ಸತ್ಯಕುಮಾರ್ ಆಡಿಂಜ, ಲೋಲಜಾಕ್ಷ ಭೂತಕಲ್ಲು, ರಾಧಾಕೃಷ್ಣ ಪರಿವಾರಕಾನ, ಮೂಸಕುಂಞ ಪೈಂಬೆಚ್ಚಾಲು ಮತ್ತಿತರರು ಉಪಸ್ಥಿತರಿದ್ದರು.
ಅಧಿಕಾರಿಗಳ ಭರವಸೆ: ಮುಂದಿನ 15 ದಿನದ ಒಳಗೆ ನ.ಪಂ.ವ್ಯಾಪ್ತಿಯ ಕಲ್ಲುಮುಟ್ಲು ತಿರುವುನಿಂದ ಸೇತುವೆಯ ತನಕ ತೇಪೆ ಕಮಗಾರಿ ಕೆಲಸ ಮಾಡಲಾಗುವುದು ಎಂದು ನಗರ ಪಂಚಾಯಿತಿ ಮುಖ್ಯಾಧಿಕಾರಿ ಎನ್.ಮತ್ತಡಿ ತಿಳಿಸಿದರು. ಅದಕ್ಕೆ ವಿರೋಧಿಸಿದ ಪ್ರತಿಭಟನಾಕರರು ಒಂದು ವಾರದ ಒಳಗೆ ತೇಪೆ ಕಾಮಗಾರಿ ನಡೆಸಿ ಎಂದು ಒತ್ತಾಯಿಸಿದರು.
ಆಡಳಿತಾಧಿಕಾರಿಯವರ ಗಮನಕ್ಕೆ ತಂದು 15 ದಿನದ ಒಳಗೆ ಮಾಡಿಸುತ್ತೇವೆ ಎಂದು ಅವರು ಹೇಳಿದರು. ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಎಸ್.ಎನ್.ಹುಕ್ಕೇರಿ ಮಾತನಾಡಿ ಆಲೆಟ್ಟಿ ಬಡ್ಡಡ್ಕ ರಸ್ತೆಗೆ 5 ಲಕ್ಷ ಅನುದಾನದಲ್ಲಿ ತುರ್ತು ತೇಪೆ ಕಾಮಗಾರಿಯನ್ನು ಮಾಡುತ್ತೇವೆ. ಅಲ್ಲದೆ ರಸ್ತೆಯಲ್ಲಿ ಡಾಮರೀಕರಣಕ್ಕೆ 25 ಲಕ್ಷದ ಪ್ರಸ್ತಾವನೆ ಸಲ್ಲಿಸಲಾಗಿದೆ. ನಾಗಪಟ್ಟಣ ಸೇತುವೆ ದುರಸ್ಥಿಗೆ 60 ಲಕ್ಷದ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ ಮಾತನಾಡಿ ನಾರ್ಕೋಡಿನಿಂದ ಕರ್ನಾಟಕದ ಗಡಿಭಾಗ ಕನ್ನಾಡಿತೋಡುವರೆಗೆ ಲೋಕೋಪಯೋಗಿ ರಸ್ತೆ ಅಭಿವೃದ್ಧಿಗೆ ಒಟ್ಟು 12.16 ಕೋಟಿ ಅನುದಾನ ಬಿಡುಗಡೆ ಆಗಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ 10.50 ಕೋಟಿ, ಬಜೆಟ್ ಅನುದಾನ 75 ಲಕ್ಷ ಮತ್ತು ಬಾರ್ಪಣೆಯಲ್ಲಿ ಸೇತುವೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಡಿ 91 ಲಕ್ಷ ಬಿಡುಗಡೆ ಆಗಿದೆ. ಮಳೆ ಬಿಟ್ಟ ಕೂಡಲೇ ರಸ್ತೆ ಕಾಮಗಾರಿ ನಡೆಸಲಾಗುವುದು ಎಂದು ತಿಳಿಸಿದರು.
ಪ್ರತಿಭಟನಾಕಾರರು ಇಲಾಖೆ ಇಂಜಿನಿಯರ್ಗಳಿ ಮನವಿ ನೀಡಿದರು. ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಗ್ರಾಮದ ಎಲ್ಲಾ ಭಾಗದ ಜನರು ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…