Advertisement
ಸುದ್ದಿಗಳು

ಸುಳ್ಯ-ಬಡ್ಡಡ್ಕ, ಸುಳ್ಯ-ಕೋಲ್ಚಾರು ರಸ್ತೆ ದುರಸ್ತಿ ಆಗ್ರಹಿಸಿ ಪ್ರತಿಭಟನೆ, ರಸ್ತೆ ತಡೆ

Share

ಸುಳ್ಯ: ಸುಳ್ಯ-ಬಂದಡ್ಕ, ಸುಳ್ಯ-ಪಾಣತ್ತೂರು ಅಂತಾರಾಜ್ಯ ಸಂಪರ್ಕ ಕಲ್ಪಿಸುವ ಸುಳ್ಯ-ಕೋಲ್ಚಾರು, ಸುಳ್ಯ-ಆಲೆಟ್ಟಿ-ಬಡ್ಡಡ್ಕ ರಸ್ತೆಯು ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ದುಸ್ತರವಾಗಿರುವುದನ್ನು ಖಂಡಿಸಿ ಸಾರ್ವಜನಿಕರು ನಾಗಪಟ್ಟಣ ಸೇತುವೆಯ ಬಳಿ ರಸ್ತೆ ತಡೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಯನ್ನುದ್ಧೇಶಿಸಿ ಮಾತನಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಈ ಭಾಗದ ರಸ್ತೆಯು ತೀರಾ ಹದಗಟ್ಟಿದ್ದು, ಜನಪ್ರತಿನಿಧಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ. ರಸ್ತೆಯ ನಿರ್ವಹಣೆ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕೆಲಸ ಮಾಡಿಸಬೇಕಾದುದು ಜನಪ್ರತಿನಿಧಿಗಳ ಜವಾಬ್ದಾರಿ. ಆದರೆ ಜನಪ್ರತಿನಿಧಿಗಳು ಅದನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದರು.

ನಗರ ಪಂಚಾಯಿತಿ ಸದಸ್ಯ ಎಂ. ವೆಂಕಪ್ಪ ಗೌಡ ಮಾತನಾಡಿ ಮೂಲಭೂತ ಸೌಕರ್ಯದಿಂದ ವಂಚಿತರಾದಾಗ ರಾಜಕೀಯ ಬದಿಗಿಟ್ಟು ಒಗ್ಗಟ್ಟಾಗಿ ಸೇರಿ ಹೋರಾಟ ನಡೆಸಬೇಕು. ಮುಂದಿನ 15 ದಿನದ ಒಳಗೆ ದುರಸ್ತಿ ಮಾಡದಿದ್ದರೆ ನಗರ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಹೆಳಿದರು. ಆಲೆಟ್ಟಿ ಗ್ರಾ.ಪಂ. ಸದಸ್ಯರಾದ ಗೀತಾ ಕೋಲ್ಚಾರ್, ಜಯಂತಿ ಕೂಟೇಲು, ಯೂಸುಫ್ ಅಂಜಿಕ್ಕಾರ್, ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ, ನ.ಪಂ.ಸದಸ್ಯರಾದ ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ಮಾಜಿ ಸದಸ್ಯ ಕೆ.ಎಂ.ಮುಸ್ತಪಾ, ಪ್ರಮುಖರಾದ ತೇಜುಕುಮಾರ್ ಬಡ್ಡಡ್ಕ, ಆರ್.ಕೆ.ಮಹಮ್ಮದ್, ಧರ್ಮಪಾಲ ಕೊಯಿಂಗಾಜೆ, ಬಾಪೂ ಸಾಹೇಬ್, ದಾಮೋದರ ಗೌಡ ನಾರ್ಕೋಡು, ಚಂದ್ರಕಾಂತ ನಾರ್ಕೋಡು, ಸತ್ಯಕುಮಾರ್ ಆಡಿಂಜ, ಲೋಲಜಾಕ್ಷ ಭೂತಕಲ್ಲು, ರಾಧಾಕೃಷ್ಣ ಪರಿವಾರಕಾನ, ಮೂಸಕುಂಞ ಪೈಂಬೆಚ್ಚಾಲು ಮತ್ತಿತರರು ಉಪಸ್ಥಿತರಿದ್ದರು.

ಅಧಿಕಾರಿಗಳ ಭರವಸೆ: ಮುಂದಿನ 15 ದಿನದ ಒಳಗೆ ನ.ಪಂ.ವ್ಯಾಪ್ತಿಯ ಕಲ್ಲುಮುಟ್ಲು ತಿರುವುನಿಂದ ಸೇತುವೆಯ ತನಕ ತೇಪೆ ಕಮಗಾರಿ ಕೆಲಸ ಮಾಡಲಾಗುವುದು ಎಂದು ನಗರ ಪಂಚಾಯಿತಿ ಮುಖ್ಯಾಧಿಕಾರಿ ಎನ್.ಮತ್ತಡಿ ತಿಳಿಸಿದರು. ಅದಕ್ಕೆ ವಿರೋಧಿಸಿದ ಪ್ರತಿಭಟನಾಕರರು ಒಂದು ವಾರದ ಒಳಗೆ ತೇಪೆ ಕಾಮಗಾರಿ ನಡೆಸಿ ಎಂದು ಒತ್ತಾಯಿಸಿದರು.

ಆಡಳಿತಾಧಿಕಾರಿಯವರ ಗಮನಕ್ಕೆ ತಂದು 15 ದಿನದ ಒಳಗೆ ಮಾಡಿಸುತ್ತೇವೆ ಎಂದು ಅವರು ಹೇಳಿದರು. ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಎಸ್.ಎನ್.ಹುಕ್ಕೇರಿ ಮಾತನಾಡಿ ಆಲೆಟ್ಟಿ ಬಡ್ಡಡ್ಕ ರಸ್ತೆಗೆ 5 ಲಕ್ಷ ಅನುದಾನದಲ್ಲಿ ತುರ್ತು ತೇಪೆ ಕಾಮಗಾರಿಯನ್ನು ಮಾಡುತ್ತೇವೆ. ಅಲ್ಲದೆ ರಸ್ತೆಯಲ್ಲಿ ಡಾಮರೀಕರಣಕ್ಕೆ 25 ಲಕ್ಷದ ಪ್ರಸ್ತಾವನೆ ಸಲ್ಲಿಸಲಾಗಿದೆ. ನಾಗಪಟ್ಟಣ ಸೇತುವೆ ದುರಸ್ಥಿಗೆ 60 ಲಕ್ಷದ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ ಮಾತನಾಡಿ ನಾರ್ಕೋಡಿನಿಂದ ಕರ್ನಾಟಕದ ಗಡಿಭಾಗ ಕನ್ನಾಡಿತೋಡುವರೆಗೆ ಲೋಕೋಪಯೋಗಿ ರಸ್ತೆ ಅಭಿವೃದ್ಧಿಗೆ ಒಟ್ಟು 12.16 ಕೋಟಿ ಅನುದಾನ ಬಿಡುಗಡೆ ಆಗಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ 10.50 ಕೋಟಿ, ಬಜೆಟ್ ಅನುದಾನ 75 ಲಕ್ಷ ಮತ್ತು ಬಾರ್ಪಣೆಯಲ್ಲಿ ಸೇತುವೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಡಿ 91 ಲಕ್ಷ ಬಿಡುಗಡೆ ಆಗಿದೆ. ಮಳೆ ಬಿಟ್ಟ ಕೂಡಲೇ ರಸ್ತೆ ಕಾಮಗಾರಿ ನಡೆಸಲಾಗುವುದು ಎಂದು ತಿಳಿಸಿದರು.

ಪ್ರತಿಭಟನಾಕಾರರು ಇಲಾಖೆ ಇಂಜಿನಿಯರ್‍ಗಳಿ ಮನವಿ ನೀಡಿದರು. ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಗ್ರಾಮದ ಎಲ್ಲಾ ಭಾಗದ ಜನರು ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

10 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

12 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

17 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

19 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago