ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಂಘಟನಾ ಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ. ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮತ್ತು ಇತರ ಜಿಲ್ಲಾ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಸುಳ್ಯ ಮಂಡಲ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಂಘಟನಾ ಚಟುವಟಿಕೆಗೆ ವೇಗ ಹೆಚ್ಚಿಸಲು ನಿರ್ಧರಿಸಲಾಯಿತು.
ಮಂಡಲ ಮತ್ತು ಬೂತ್ ಸಮಿತಿಗಳ ಅವಧಿ ಮುಗಿದಿದ್ದು ಮುಂದಿನ ಒಂದು ತಿಂಗಳಲ್ಲಿ ಎಲ್ಲಾ ಸಮಿತಿಗಳ ಪುನರ್ ರಚನೆಗೆ ನಿರ್ಧರಿಸಲಾಯಿತು. ಕ್ಷೇತ್ರದ 231 ಬೂತ್ ಸಮಿತಿಗಳ ಪೈಕಿ ಈಗಾಗಲೇ 100 ಬೂತ್ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಸೆ.30ರ ಒಳಗೆ ಎಲ್ಲಾ ಬೂತ್ ಸಮಿತಿಯ ಪುನರ್ ರಚನೆಗೆ ನಿರ್ಧರಿಸಲಾಯಿತು. ಅ.15ರಿಂದ 30ರೊಳಗೆ ಮಂಡಲ ಸಮಿತಿ ಪುನರ್ ರಚನೆ ನಡೆಯಲಿದೆ. ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ನೇತೃತ್ವದ ಸಮಿತಿಯ ಅವಧಿ ಮುಗಿದಿದ್ದು ನೂತನ ಸಾರಥಿಗಳ ಆಯ್ಕೆ ನಡೆಯಲಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಮುಖಂಡರಾದ ಪ್ರತಾಪ ಸಿಂಹ ನಾಯಕ್, ಸುದರ್ಶನ ಮೂಡಬಿದ್ರೆ, ಪ್ರಸಾದ್ ಬೆಳ್ತಂಗಡಿ, ಸುಳ್ಯ ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮತ್ತಿತರ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…