ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಂಘಟನಾ ಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ. ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮತ್ತು ಇತರ ಜಿಲ್ಲಾ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಸುಳ್ಯ ಮಂಡಲ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಂಘಟನಾ ಚಟುವಟಿಕೆಗೆ ವೇಗ ಹೆಚ್ಚಿಸಲು ನಿರ್ಧರಿಸಲಾಯಿತು.
ಮಂಡಲ ಮತ್ತು ಬೂತ್ ಸಮಿತಿಗಳ ಅವಧಿ ಮುಗಿದಿದ್ದು ಮುಂದಿನ ಒಂದು ತಿಂಗಳಲ್ಲಿ ಎಲ್ಲಾ ಸಮಿತಿಗಳ ಪುನರ್ ರಚನೆಗೆ ನಿರ್ಧರಿಸಲಾಯಿತು. ಕ್ಷೇತ್ರದ 231 ಬೂತ್ ಸಮಿತಿಗಳ ಪೈಕಿ ಈಗಾಗಲೇ 100 ಬೂತ್ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಸೆ.30ರ ಒಳಗೆ ಎಲ್ಲಾ ಬೂತ್ ಸಮಿತಿಯ ಪುನರ್ ರಚನೆಗೆ ನಿರ್ಧರಿಸಲಾಯಿತು. ಅ.15ರಿಂದ 30ರೊಳಗೆ ಮಂಡಲ ಸಮಿತಿ ಪುನರ್ ರಚನೆ ನಡೆಯಲಿದೆ. ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ನೇತೃತ್ವದ ಸಮಿತಿಯ ಅವಧಿ ಮುಗಿದಿದ್ದು ನೂತನ ಸಾರಥಿಗಳ ಆಯ್ಕೆ ನಡೆಯಲಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಮುಖಂಡರಾದ ಪ್ರತಾಪ ಸಿಂಹ ನಾಯಕ್, ಸುದರ್ಶನ ಮೂಡಬಿದ್ರೆ, ಪ್ರಸಾದ್ ಬೆಳ್ತಂಗಡಿ, ಸುಳ್ಯ ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮತ್ತಿತರ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…