ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಂಘಟನಾ ಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ. ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮತ್ತು ಇತರ ಜಿಲ್ಲಾ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಸುಳ್ಯ ಮಂಡಲ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಂಘಟನಾ ಚಟುವಟಿಕೆಗೆ ವೇಗ ಹೆಚ್ಚಿಸಲು ನಿರ್ಧರಿಸಲಾಯಿತು.
ಮಂಡಲ ಮತ್ತು ಬೂತ್ ಸಮಿತಿಗಳ ಅವಧಿ ಮುಗಿದಿದ್ದು ಮುಂದಿನ ಒಂದು ತಿಂಗಳಲ್ಲಿ ಎಲ್ಲಾ ಸಮಿತಿಗಳ ಪುನರ್ ರಚನೆಗೆ ನಿರ್ಧರಿಸಲಾಯಿತು. ಕ್ಷೇತ್ರದ 231 ಬೂತ್ ಸಮಿತಿಗಳ ಪೈಕಿ ಈಗಾಗಲೇ 100 ಬೂತ್ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಸೆ.30ರ ಒಳಗೆ ಎಲ್ಲಾ ಬೂತ್ ಸಮಿತಿಯ ಪುನರ್ ರಚನೆಗೆ ನಿರ್ಧರಿಸಲಾಯಿತು. ಅ.15ರಿಂದ 30ರೊಳಗೆ ಮಂಡಲ ಸಮಿತಿ ಪುನರ್ ರಚನೆ ನಡೆಯಲಿದೆ. ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ನೇತೃತ್ವದ ಸಮಿತಿಯ ಅವಧಿ ಮುಗಿದಿದ್ದು ನೂತನ ಸಾರಥಿಗಳ ಆಯ್ಕೆ ನಡೆಯಲಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಮುಖಂಡರಾದ ಪ್ರತಾಪ ಸಿಂಹ ನಾಯಕ್, ಸುದರ್ಶನ ಮೂಡಬಿದ್ರೆ, ಪ್ರಸಾದ್ ಬೆಳ್ತಂಗಡಿ, ಸುಳ್ಯ ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮತ್ತಿತರ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…