ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಸುಳ್ಯ ಬಿಜೆಪಿಗೆ ಡಬಲ್ ಧಮಾಕಾ. ಕೇಂದ್ರದಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವುದರ ಜೊತೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಭರ್ಜರಿ ಗೆಲುವಿನತ್ತ ಮುನ್ನಡೆದಿರುವುದು ಕಾರ್ಯಕರ್ತರನ್ನು ಸಂಭ್ರಮದ ಅಲೆಯಲ್ಲಿ ತೇಲುವಂತೆ ಮಾಡಿದೆ. ಸುಳ್ಯದಲ್ಲಿ ಕಾರ್ಯಕರ್ತರು ಅಲ್ಲಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆರಂಭಿಸಿದ್ದಾರೆ.ಬೆಳಿಗ್ಗಿನಿಂದಲೇ ಬಿಜೆಪಿ ಭಾರೀ ಮುನ್ನಡೆಯ ಸೂಚನೆ ದೊರೆಯುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಹಲವು ಮಂದಿ ಅಲ್ಲಲ್ಲಿ ಸಿಹಿ ತಿಂಡಿ ವಿತರಿಸಿ, ಗೆಲುವಿನ ನಗೆ ಬೀರಿ ಸಂಭ್ರಮಿಸುತ್ತಿರುವುದು ಕಂಡು ಬರುತ್ತಿತ್ತು. ಬಿಜೆಪಿ ಕಚೇರಿ ಮತ್ತಿತರ ಬಿಜೆಪಿ ಕೇಂದ್ರಗಳಲ್ಲಿ ಸಂಭ್ರಮ ಮುಂದುವರಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"