ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಸುಳ್ಯ ಬಿಜೆಪಿಗೆ ಡಬಲ್ ಧಮಾಕಾ. ಕೇಂದ್ರದಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವುದರ ಜೊತೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಭರ್ಜರಿ ಗೆಲುವಿನತ್ತ ಮುನ್ನಡೆದಿರುವುದು ಕಾರ್ಯಕರ್ತರನ್ನು ಸಂಭ್ರಮದ ಅಲೆಯಲ್ಲಿ ತೇಲುವಂತೆ ಮಾಡಿದೆ. ಸುಳ್ಯದಲ್ಲಿ ಕಾರ್ಯಕರ್ತರು ಅಲ್ಲಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆರಂಭಿಸಿದ್ದಾರೆ.ಬೆಳಿಗ್ಗಿನಿಂದಲೇ ಬಿಜೆಪಿ ಭಾರೀ ಮುನ್ನಡೆಯ ಸೂಚನೆ ದೊರೆಯುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಹಲವು ಮಂದಿ ಅಲ್ಲಲ್ಲಿ ಸಿಹಿ ತಿಂಡಿ ವಿತರಿಸಿ, ಗೆಲುವಿನ ನಗೆ ಬೀರಿ ಸಂಭ್ರಮಿಸುತ್ತಿರುವುದು ಕಂಡು ಬರುತ್ತಿತ್ತು. ಬಿಜೆಪಿ ಕಚೇರಿ ಮತ್ತಿತರ ಬಿಜೆಪಿ ಕೇಂದ್ರಗಳಲ್ಲಿ ಸಂಭ್ರಮ ಮುಂದುವರಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…