ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಸುಳ್ಯ ಬಿಜೆಪಿಗೆ ಡಬಲ್ ಧಮಾಕಾ. ಕೇಂದ್ರದಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವುದರ ಜೊತೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಭರ್ಜರಿ ಗೆಲುವಿನತ್ತ ಮುನ್ನಡೆದಿರುವುದು ಕಾರ್ಯಕರ್ತರನ್ನು ಸಂಭ್ರಮದ ಅಲೆಯಲ್ಲಿ ತೇಲುವಂತೆ ಮಾಡಿದೆ. ಸುಳ್ಯದಲ್ಲಿ ಕಾರ್ಯಕರ್ತರು ಅಲ್ಲಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆರಂಭಿಸಿದ್ದಾರೆ.ಬೆಳಿಗ್ಗಿನಿಂದಲೇ ಬಿಜೆಪಿ ಭಾರೀ ಮುನ್ನಡೆಯ ಸೂಚನೆ ದೊರೆಯುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಹಲವು ಮಂದಿ ಅಲ್ಲಲ್ಲಿ ಸಿಹಿ ತಿಂಡಿ ವಿತರಿಸಿ, ಗೆಲುವಿನ ನಗೆ ಬೀರಿ ಸಂಭ್ರಮಿಸುತ್ತಿರುವುದು ಕಂಡು ಬರುತ್ತಿತ್ತು. ಬಿಜೆಪಿ ಕಚೇರಿ ಮತ್ತಿತರ ಬಿಜೆಪಿ ಕೇಂದ್ರಗಳಲ್ಲಿ ಸಂಭ್ರಮ ಮುಂದುವರಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…