ಸುಳ್ಯ: ಅಂಗಾರರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಹಕಾರ ಚಳವಳಿ ಘೋಷಣೆ ಮಾಡಿದ್ದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರು. ಆದರೆ ಅಸಹಾಕಾರ ಚಳವಳಿ ಕಾಂಗ್ರೆಸ್ ಸೃಷ್ಠಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳುತ್ತಿದ್ದಾರೆ. ಹಾಗಾದರೆ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರು ಕಾಂಗ್ರೆಸ್ ಸೇರಿದ್ದು ಯಾವಾಗ ಎಂಬುದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಲಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಡ್ಡದಾರಿಯಲ್ಲಿ ಅಧಿಕಾರ ಹಿಡಿದ ಕಾರಣ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಪ್ರಾಮಾಣಿಕರನ್ನೂ, ಆರು ಬಾರಿ ಶಾಸಕರಾದವರನ್ನೂ ಮಂತ್ರಿಸ್ಥಾನ ನೀಡದೆ ಕಡೆಗಣಿಸಿದ್ದಾರೆ. ಮತದಾರ ಕೊಟ್ಟ ಜನಾದೇಶಕ್ಕೆ ಬಿಜೆಪಿ ಅಪಚಾರ ಮಾಡಿದೆ ಎಂದು ಅವರು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ಎಸ್.ಗಂಗಾಧರ, ಸುಧೀರ್ ರೈ ಮೇನಾಲ, ನಂದರಾಜ ಸಂಕೇಶ, ಭವಾನಿಶಂಕರ ಕಲ್ಮಡ್ಕ, ಶ್ರೀಲತಾ ಪ್ರಸನ್ನ ಉಪಸ್ಥಿತರಿದ್ದರು.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…