ಸುಳ್ಯ:ಸುಳ್ಯ ಬಿಜೆಪಿ ಮಂಡಲ ಸಮಿತಿ ನೂತನ ಅಧ್ಯಕ್ಷರಾಗಿ ಹರೀಶ್ ಕಂಜಿಪಿಲಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿದ್ದ ವೆಂಕಟ್ ವಳಲಂಬೆ ಅವರ ಅವಧಿ ಮುಗಿದ ಹಿನ್ನಲೆಯಲ್ಲಿ ಹೊಸ ಅಧ್ಯಕ್ಷರ ಆಯ್ಕೆ ನಡೆಯಿತು. ಸುಳ್ಯ ವೆಂಕಟ್ರಮಣ ದೇವಸ್ಥಾನದ ಸಭಾಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಆಯ್ಕೆ ನಡೆಯಿತು. ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರುಗಳು, ಬಿಜೆಪಿ ಸಕ್ರೀಯ ಸದಸದರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್ ಸದಸ್ಯರು ಭಾಗವಹಿಸಿದ್ದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಜಿಲ್ಲಾ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ವಿಭಾಗ ಚುನಾವಣಾ ಪ್ರಭಾರಿ ಉದಯಕುಮಾರ್ ಶೆಟ್ಟಿ, ಶಾಸಕ ಎಸ್.ಅಂಗಾರ ಉಪಸ್ಥಿತರಿದ್ದರು. ಮಮಡಲ ಸಮಿತಿಯ ಉಳಿದ ಪದಾಧಿಕಾರಿಗಳ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.
ಎರಡನೇ ಬಾರಿಗೆ ಹರೀಶ್ ಕಂಜಿಪಿಲಿ ಮಂಡಲ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವೆಂಕಟ್ ವಳಲಂಬೆ ಅವರಿಗಿಂತ ಮೊದಲು ಮೂರು ವರ್ಷಗಳ ಕಾಲ ಮಂಡಲ ಸಮಿತಿ ಅಧ್ಯಕ್ಷರಾಗಿದ್ದರು. ಅರಂತೋಡು ಕ್ಷೇತ್ರದ ಜಿ. ಪಂ. ಸದಸ್ಯರಾಗಿರುವ ಹರೀಶ್ ಕಂಜಿಪಿಲಿ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…