Advertisement
ಸುದ್ದಿಗಳು

ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾಗಿ ಹರೀಶ್ ಕಂಜಿಪಿಲಿ ಆಯ್ಕೆ

Share

ಸುಳ್ಯ:ಸುಳ್ಯ ಬಿಜೆಪಿ ಮಂಡಲ ಸಮಿತಿ ನೂತನ ಅಧ್ಯಕ್ಷರಾಗಿ ಹರೀಶ್ ಕಂಜಿಪಿಲಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿದ್ದ ವೆಂಕಟ್ ವಳಲಂಬೆ ಅವರ ಅವಧಿ ಮುಗಿದ ಹಿನ್ನಲೆಯಲ್ಲಿ ಹೊಸ ಅಧ್ಯಕ್ಷರ ಆಯ್ಕೆ ನಡೆಯಿತು. ಸುಳ್ಯ ವೆಂಕಟ್ರಮಣ ದೇವಸ್ಥಾನದ ಸಭಾಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಆಯ್ಕೆ ನಡೆಯಿತು. ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರುಗಳು, ಬಿಜೆಪಿ ಸಕ್ರೀಯ ಸದಸದರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್ ಸದಸ್ಯರು ಭಾಗವಹಿಸಿದ್ದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಜಿಲ್ಲಾ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ವಿಭಾಗ ಚುನಾವಣಾ ಪ್ರಭಾರಿ ಉದಯಕುಮಾರ್ ಶೆಟ್ಟಿ, ಶಾಸಕ ಎಸ್.ಅಂಗಾರ ಉಪಸ್ಥಿತರಿದ್ದರು. ಮಮಡಲ ಸಮಿತಿಯ ಉಳಿದ ಪದಾಧಿಕಾರಿಗಳ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.

ಎರಡನೇ ಬಾರಿಗೆ ಹರೀಶ್ ಕಂಜಿಪಿಲಿ ಮಂಡಲ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವೆಂಕಟ್ ವಳಲಂಬೆ ಅವರಿಗಿಂತ ಮೊದಲು ಮೂರು ವರ್ಷಗಳ ಕಾಲ ಮಂಡಲ ಸಮಿತಿ ಅಧ್ಯಕ್ಷರಾಗಿದ್ದರು. ಅರಂತೋಡು ಕ್ಷೇತ್ರದ ಜಿ. ಪಂ. ಸದಸ್ಯರಾಗಿರುವ ಹರೀಶ್ ಕಂಜಿಪಿಲಿ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

16 minutes ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

24 minutes ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

38 minutes ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

16 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

16 hours ago