Advertisement
ಸುದ್ದಿಗಳು

ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾಗಿ ಹರೀಶ್ ಕಂಜಿಪಿಲಿ ಆಯ್ಕೆ

Share

ಸುಳ್ಯ:ಸುಳ್ಯ ಬಿಜೆಪಿ ಮಂಡಲ ಸಮಿತಿ ನೂತನ ಅಧ್ಯಕ್ಷರಾಗಿ ಹರೀಶ್ ಕಂಜಿಪಿಲಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿದ್ದ ವೆಂಕಟ್ ವಳಲಂಬೆ ಅವರ ಅವಧಿ ಮುಗಿದ ಹಿನ್ನಲೆಯಲ್ಲಿ ಹೊಸ ಅಧ್ಯಕ್ಷರ ಆಯ್ಕೆ ನಡೆಯಿತು. ಸುಳ್ಯ ವೆಂಕಟ್ರಮಣ ದೇವಸ್ಥಾನದ ಸಭಾಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಆಯ್ಕೆ ನಡೆಯಿತು. ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರುಗಳು, ಬಿಜೆಪಿ ಸಕ್ರೀಯ ಸದಸದರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್ ಸದಸ್ಯರು ಭಾಗವಹಿಸಿದ್ದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಜಿಲ್ಲಾ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ವಿಭಾಗ ಚುನಾವಣಾ ಪ್ರಭಾರಿ ಉದಯಕುಮಾರ್ ಶೆಟ್ಟಿ, ಶಾಸಕ ಎಸ್.ಅಂಗಾರ ಉಪಸ್ಥಿತರಿದ್ದರು. ಮಮಡಲ ಸಮಿತಿಯ ಉಳಿದ ಪದಾಧಿಕಾರಿಗಳ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.

ಎರಡನೇ ಬಾರಿಗೆ ಹರೀಶ್ ಕಂಜಿಪಿಲಿ ಮಂಡಲ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವೆಂಕಟ್ ವಳಲಂಬೆ ಅವರಿಗಿಂತ ಮೊದಲು ಮೂರು ವರ್ಷಗಳ ಕಾಲ ಮಂಡಲ ಸಮಿತಿ ಅಧ್ಯಕ್ಷರಾಗಿದ್ದರು. ಅರಂತೋಡು ಕ್ಷೇತ್ರದ ಜಿ. ಪಂ. ಸದಸ್ಯರಾಗಿರುವ ಹರೀಶ್ ಕಂಜಿಪಿಲಿ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

3 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

20 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago