ಸುಳ್ಯ:ಸುಳ್ಯ ಬಿಜೆಪಿ ಮಂಡಲ ಸಮಿತಿ ನೂತನ ಅಧ್ಯಕ್ಷರಾಗಿ ಹರೀಶ್ ಕಂಜಿಪಿಲಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿದ್ದ ವೆಂಕಟ್ ವಳಲಂಬೆ ಅವರ ಅವಧಿ ಮುಗಿದ ಹಿನ್ನಲೆಯಲ್ಲಿ ಹೊಸ ಅಧ್ಯಕ್ಷರ ಆಯ್ಕೆ ನಡೆಯಿತು. ಸುಳ್ಯ ವೆಂಕಟ್ರಮಣ ದೇವಸ್ಥಾನದ ಸಭಾಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಆಯ್ಕೆ ನಡೆಯಿತು. ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರುಗಳು, ಬಿಜೆಪಿ ಸಕ್ರೀಯ ಸದಸದರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್ ಸದಸ್ಯರು ಭಾಗವಹಿಸಿದ್ದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಜಿಲ್ಲಾ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ವಿಭಾಗ ಚುನಾವಣಾ ಪ್ರಭಾರಿ ಉದಯಕುಮಾರ್ ಶೆಟ್ಟಿ, ಶಾಸಕ ಎಸ್.ಅಂಗಾರ ಉಪಸ್ಥಿತರಿದ್ದರು. ಮಮಡಲ ಸಮಿತಿಯ ಉಳಿದ ಪದಾಧಿಕಾರಿಗಳ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.
ಎರಡನೇ ಬಾರಿಗೆ ಹರೀಶ್ ಕಂಜಿಪಿಲಿ ಮಂಡಲ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವೆಂಕಟ್ ವಳಲಂಬೆ ಅವರಿಗಿಂತ ಮೊದಲು ಮೂರು ವರ್ಷಗಳ ಕಾಲ ಮಂಡಲ ಸಮಿತಿ ಅಧ್ಯಕ್ಷರಾಗಿದ್ದರು. ಅರಂತೋಡು ಕ್ಷೇತ್ರದ ಜಿ. ಪಂ. ಸದಸ್ಯರಾಗಿರುವ ಹರೀಶ್ ಕಂಜಿಪಿಲಿ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…