ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಗೆ ಸದ್ಯದಲ್ಲಿಯೇ ನೂತನ ಅಧ್ಯಕ್ಷರ ನೇಮಕಾತಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ವಿದೇಶ ಪ್ರವಾಸದ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆದರೆ ಅವರ ರಾಜಿನಾಮೆ ಅಂಗೀಕಾರ ಆಗಿಲ್ಲ. ಹೊಸ ಅಧ್ಯಕ್ಷರ ನೇಮಕ ಆಗುವವರೆಗೆ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ಆಯ್ಕೆ, ಬ್ಲಾಕ್ ಗಳಿಗೆ ಹೊಸ ಅಧ್ಯಕ್ಷರ ನೇಮಕಾತಿ ಕೆಲವೊಂದು ಕಾರಣಗಳಿಂದ ವಿಳಂಬ ಆಗಿದೆ. ಸದ್ಯದಲ್ಲಿಯೇ ನೇಮಕಾತಿ ನಡೆಯುವ ಸಾಧ್ಯತೆ ಎಂದು ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹರೀಶ್ ಕುಮಾರ್ ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel