Advertisement
ನಮ್ಮೂರ ಸುದ್ದಿ

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಡ್ಡಂಬೈಲು ವೆಂಕಟ್ರಮಣ ಗೌಡರಿಗೆ ಶ್ರದ್ಧಾಂಜಲಿ

Share

ಸುಳ್ಯ: ಜೂ.8 ರಂದು ನಿಧನರಾದ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಡ್ಡಂಬೈಲು ವೆಂಕಟ್ರಮಣ ಗೌಡರಿಗೆ ಶ್ರದ್ಧಾಂಜಲಿ ಸಭೆಯು ಸುಳ್ಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಕೆ.ಪಿಸಿ.ಸಿ ಕಾರ್ಯದರ್ಶಿ ಟಿ.ಎಂ. ಶಹೀದ್ ಮಾತನಾಡಿ ಸುಳ್ಯ ಕಾಂಗ್ರೆಸ್ ಪಕ್ಷ ದಲ್ಲಿ ಕಾರ್ಯಕರ್ತ ರನ್ನು ಒಗ್ಗೂಡಿಸುವ ಕಾರ್ಯವನ್ನು ಮಾಡಿದ ಇವರು ಪಕ್ಷಕ್ಕಾಗಿ ಆಹೋರಾತ್ರಿ ದುಡಿದವರು.ಸಮಾಜಕ್ಕಾಗಿ ಅಭಿವೃದ್ಧಿ ಕೆಲಸವನ್ನು ಮಾಡಲು ಅವಿರತವಾಗಿ ಶ್ರಮಿಸಿದರು.ಸುಳ್ಯ ನಗರದಲ್ಲಿ ಶಿಕ್ಷಣವನ್ನು ನೀಡಿದ ಇವರು ಉತ್ತಮ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ಶಿಕ್ಷಣ ಸಂಸ್ಥೆಗೆ ಪ್ರೇರಣೆಯಾದವರು ಎಂದು ಸ್ಮರಿಸಿದರು.

ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ .ಜಯರಾಂ ಮಾತನಾಡಿ ಗ್ರಾಮೀಣಾಭಿವೃದ್ಧಿಯಲ್ಲಿ ಪಡ್ಡಂಬೈಲು ವೆಂಕಟ್ರಮಣರವರ ಸೇವೆ ಅವಿಸ್ಮರಣೀಯ ರಸ್ತೆ ,ಸೇತುವೆ ,ಮೂಲಭೂತ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಶ್ರಮಿಸಿದ ಇವರು ನಿರಂತರವಾಗಿ ಬಡವರ ಸಮಸ್ಯೆಗಳನ್ನು ಬಗೆಹರಿಸಲು ಸಹಕರಿಸಿದವರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಶೇಖರ ಕಾಮತ್ ಮಾತನಾಡಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಗಿ ದುಡಿದ ಇವರು ಪ್ರತಿಯೊಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಶ್ರಮ ವಹಿಸಿದವರು ಇವರು ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲ ರಾಗಿ ಕೃಷಿ ಕರಾಗಿ ಸಮಾಜ ಸೇವಕರಾಗಿ ರಾಜಕೀಯ ನೇತಾರ ರಾಗಿ ಸಮಾಜಕ್ಕೆ ಕೊಡುಗೆ ನೀಡಿದವರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪಿ.ಎಸ್ .ಗಂಗಾಧರ್ ನುಡಿನಮನ ಸಲ್ಲಿಸಿದರು. ಸಭೆಯಲ್ಲಿ ಕೆ.ಎಂ.ಮುಸ್ತಫಾ , ನಂದರಾಜ್ ಸಂಕೇಶ್,ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡೆಂಕೆರಿ,ಸುಧೀರ್ ರೈ ಮೇನಾಲ, ಬೀರಾ ಮೊಯಿದಿನ್, ದಿನೇಶ್ ಅಂಬೆಕಲ್ಲು,ಶ್ರೀ ಹರಿ ಕುಕ್ಕೆಡೇಲು, ಪವಾಜ್ ಕನಕಮಜಲು,ಶಾಫಿ ಕುತ್ತಮೊಟ್ಟೆ ,ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಿಧನ ರಾದ ಸಾಹಿತಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಗಿರೀಶ್ ಕಾರ್ನಾಡ್ ಮತ್ತು ಕಾಂಗ್ರೆಸ್ ಕಾರ್ಯಕರ್ತ ಇಬ್ರಾಹಿಂ ಹಳೆಗೇಟು ಅವರಿಗೂ ಶ್ರದ್ಧಾಂಜಲಿ ಅರ್ಪಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

4 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

5 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

5 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

12 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

17 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago