Advertisement
ನಮ್ಮೂರ ಸುದ್ದಿ

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಡ್ಡಂಬೈಲು ವೆಂಕಟ್ರಮಣ ಗೌಡರಿಗೆ ಶ್ರದ್ಧಾಂಜಲಿ

Share

ಸುಳ್ಯ: ಜೂ.8 ರಂದು ನಿಧನರಾದ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಡ್ಡಂಬೈಲು ವೆಂಕಟ್ರಮಣ ಗೌಡರಿಗೆ ಶ್ರದ್ಧಾಂಜಲಿ ಸಭೆಯು ಸುಳ್ಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಕೆ.ಪಿಸಿ.ಸಿ ಕಾರ್ಯದರ್ಶಿ ಟಿ.ಎಂ. ಶಹೀದ್ ಮಾತನಾಡಿ ಸುಳ್ಯ ಕಾಂಗ್ರೆಸ್ ಪಕ್ಷ ದಲ್ಲಿ ಕಾರ್ಯಕರ್ತ ರನ್ನು ಒಗ್ಗೂಡಿಸುವ ಕಾರ್ಯವನ್ನು ಮಾಡಿದ ಇವರು ಪಕ್ಷಕ್ಕಾಗಿ ಆಹೋರಾತ್ರಿ ದುಡಿದವರು.ಸಮಾಜಕ್ಕಾಗಿ ಅಭಿವೃದ್ಧಿ ಕೆಲಸವನ್ನು ಮಾಡಲು ಅವಿರತವಾಗಿ ಶ್ರಮಿಸಿದರು.ಸುಳ್ಯ ನಗರದಲ್ಲಿ ಶಿಕ್ಷಣವನ್ನು ನೀಡಿದ ಇವರು ಉತ್ತಮ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ಶಿಕ್ಷಣ ಸಂಸ್ಥೆಗೆ ಪ್ರೇರಣೆಯಾದವರು ಎಂದು ಸ್ಮರಿಸಿದರು.

ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ .ಜಯರಾಂ ಮಾತನಾಡಿ ಗ್ರಾಮೀಣಾಭಿವೃದ್ಧಿಯಲ್ಲಿ ಪಡ್ಡಂಬೈಲು ವೆಂಕಟ್ರಮಣರವರ ಸೇವೆ ಅವಿಸ್ಮರಣೀಯ ರಸ್ತೆ ,ಸೇತುವೆ ,ಮೂಲಭೂತ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಶ್ರಮಿಸಿದ ಇವರು ನಿರಂತರವಾಗಿ ಬಡವರ ಸಮಸ್ಯೆಗಳನ್ನು ಬಗೆಹರಿಸಲು ಸಹಕರಿಸಿದವರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಶೇಖರ ಕಾಮತ್ ಮಾತನಾಡಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಗಿ ದುಡಿದ ಇವರು ಪ್ರತಿಯೊಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಶ್ರಮ ವಹಿಸಿದವರು ಇವರು ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲ ರಾಗಿ ಕೃಷಿ ಕರಾಗಿ ಸಮಾಜ ಸೇವಕರಾಗಿ ರಾಜಕೀಯ ನೇತಾರ ರಾಗಿ ಸಮಾಜಕ್ಕೆ ಕೊಡುಗೆ ನೀಡಿದವರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪಿ.ಎಸ್ .ಗಂಗಾಧರ್ ನುಡಿನಮನ ಸಲ್ಲಿಸಿದರು. ಸಭೆಯಲ್ಲಿ ಕೆ.ಎಂ.ಮುಸ್ತಫಾ , ನಂದರಾಜ್ ಸಂಕೇಶ್,ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡೆಂಕೆರಿ,ಸುಧೀರ್ ರೈ ಮೇನಾಲ, ಬೀರಾ ಮೊಯಿದಿನ್, ದಿನೇಶ್ ಅಂಬೆಕಲ್ಲು,ಶ್ರೀ ಹರಿ ಕುಕ್ಕೆಡೇಲು, ಪವಾಜ್ ಕನಕಮಜಲು,ಶಾಫಿ ಕುತ್ತಮೊಟ್ಟೆ ,ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಿಧನ ರಾದ ಸಾಹಿತಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಗಿರೀಶ್ ಕಾರ್ನಾಡ್ ಮತ್ತು ಕಾಂಗ್ರೆಸ್ ಕಾರ್ಯಕರ್ತ ಇಬ್ರಾಹಿಂ ಹಳೆಗೇಟು ಅವರಿಗೂ ಶ್ರದ್ಧಾಂಜಲಿ ಅರ್ಪಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 hour ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

3 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

8 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

14 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

14 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago