ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮಾ ಗಾಂಧಿ 150 ನೇ ಜಯಂತಿ ಆಚರಣೆ

October 3, 2019
8:51 AM

ಸುಳ್ಯ:ಮಹಾತ್ಮಾ ಗಾಂಧೀಜಿಯವರ 150 ನೇ ಜಯಂತಿ ಆಚರಣೆ ಕನಕ ಮಜಲು ಗ್ರಾಮ ಕಾಂಗ್ರೆಸ್ ಆಶ್ರಯದಲ್ಲಿ ಕನಕ ಮಜಲು ಶ್ರೀಮತಿ ಸೀತಮ್ಮ ನರಿಯೂರು ಇವರ ಮನೆಯಲ್ಲಿ ನಡೆಯಿತು. ಕನಕ ಮಜಲು ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಹೇಮಚಂದ್ರ ಕುತ್ಯಾಳ ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಗಾಂಧೀವಾದಿ ಕೊರಂಬಡ್ಕ ಮೋನಪ್ಪ ಗೌಡರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಅಧ್ಯಾಪಕರು ಕೇಪು ಸುಂದರ ಗೌಡ ನೆರವೇರಿಸಿದರು.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಮಿತಿ ಸುಳ್ಯ ಇದರ ಅಧ್ಯಕ್ಷ ಎಸ್ ಎಂ ಬಾಪು ಸಾಹೇಬ್ ಹಾಗು ನಿವೃತ್ತ ಪ್ರಾಧ್ಯಾಪಕ ಸೀತಾರಾಮ ಬುಡ್ಲೆಗುತ್ತು ಗಾಂಧೀ ಸಂದೇಶ ನೀಡಿದರು. ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಹಾಗು ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕನಕ ಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಬೀರಾ ಮೊಯಿದೀನ್ ವಂದಿಸಿದರು. ವಿಜಯ ಕುಮಾರ ನರಿಯೂರು ಕಾರ್ಯಕ್ರಮ ನಿರೂಪಿಸಿದರು. ವಕೀಲ ಮಹಮ್ಮದ್ ಪವಾಜ್ , ನಂದರಾಜ್ ಸಂಕೇಶ, ಶಶಿಧರ ಎಂ ಜೆ, ಭವಾನಿಶಂಕರ್ ಕಲ್ಮಡ್ಕ, ದಿನೇಶ್ ಸರಸ್ವತಿ ಮಹಲು, ಗ್ರಾಮ ಸಮಿತಿ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಉಪಸ್ತಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror