ಸುಳ್ಯ:ಮಹಾತ್ಮಾ ಗಾಂಧೀಜಿಯವರ 150 ನೇ ಜಯಂತಿ ಆಚರಣೆ ಕನಕ ಮಜಲು ಗ್ರಾಮ ಕಾಂಗ್ರೆಸ್ ಆಶ್ರಯದಲ್ಲಿ ಕನಕ ಮಜಲು ಶ್ರೀಮತಿ ಸೀತಮ್ಮ ನರಿಯೂರು ಇವರ ಮನೆಯಲ್ಲಿ ನಡೆಯಿತು. ಕನಕ ಮಜಲು ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಹೇಮಚಂದ್ರ ಕುತ್ಯಾಳ ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಗಾಂಧೀವಾದಿ ಕೊರಂಬಡ್ಕ ಮೋನಪ್ಪ ಗೌಡರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಅಧ್ಯಾಪಕರು ಕೇಪು ಸುಂದರ ಗೌಡ ನೆರವೇರಿಸಿದರು.
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಮಿತಿ ಸುಳ್ಯ ಇದರ ಅಧ್ಯಕ್ಷ ಎಸ್ ಎಂ ಬಾಪು ಸಾಹೇಬ್ ಹಾಗು ನಿವೃತ್ತ ಪ್ರಾಧ್ಯಾಪಕ ಸೀತಾರಾಮ ಬುಡ್ಲೆಗುತ್ತು ಗಾಂಧೀ ಸಂದೇಶ ನೀಡಿದರು. ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಹಾಗು ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕನಕ ಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಬೀರಾ ಮೊಯಿದೀನ್ ವಂದಿಸಿದರು. ವಿಜಯ ಕುಮಾರ ನರಿಯೂರು ಕಾರ್ಯಕ್ರಮ ನಿರೂಪಿಸಿದರು. ವಕೀಲ ಮಹಮ್ಮದ್ ಪವಾಜ್ , ನಂದರಾಜ್ ಸಂಕೇಶ, ಶಶಿಧರ ಎಂ ಜೆ, ಭವಾನಿಶಂಕರ್ ಕಲ್ಮಡ್ಕ, ದಿನೇಶ್ ಸರಸ್ವತಿ ಮಹಲು, ಗ್ರಾಮ ಸಮಿತಿ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಉಪಸ್ತಿತರಿದ್ದರು.
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…