ಸುಳ್ಯ:ಮಹಾತ್ಮಾ ಗಾಂಧೀಜಿಯವರ 150 ನೇ ಜಯಂತಿ ಆಚರಣೆ ಕನಕ ಮಜಲು ಗ್ರಾಮ ಕಾಂಗ್ರೆಸ್ ಆಶ್ರಯದಲ್ಲಿ ಕನಕ ಮಜಲು ಶ್ರೀಮತಿ ಸೀತಮ್ಮ ನರಿಯೂರು ಇವರ ಮನೆಯಲ್ಲಿ ನಡೆಯಿತು. ಕನಕ ಮಜಲು ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಹೇಮಚಂದ್ರ ಕುತ್ಯಾಳ ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಗಾಂಧೀವಾದಿ ಕೊರಂಬಡ್ಕ ಮೋನಪ್ಪ ಗೌಡರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಅಧ್ಯಾಪಕರು ಕೇಪು ಸುಂದರ ಗೌಡ ನೆರವೇರಿಸಿದರು.
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಮಿತಿ ಸುಳ್ಯ ಇದರ ಅಧ್ಯಕ್ಷ ಎಸ್ ಎಂ ಬಾಪು ಸಾಹೇಬ್ ಹಾಗು ನಿವೃತ್ತ ಪ್ರಾಧ್ಯಾಪಕ ಸೀತಾರಾಮ ಬುಡ್ಲೆಗುತ್ತು ಗಾಂಧೀ ಸಂದೇಶ ನೀಡಿದರು. ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಹಾಗು ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕನಕ ಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಬೀರಾ ಮೊಯಿದೀನ್ ವಂದಿಸಿದರು. ವಿಜಯ ಕುಮಾರ ನರಿಯೂರು ಕಾರ್ಯಕ್ರಮ ನಿರೂಪಿಸಿದರು. ವಕೀಲ ಮಹಮ್ಮದ್ ಪವಾಜ್ , ನಂದರಾಜ್ ಸಂಕೇಶ, ಶಶಿಧರ ಎಂ ಜೆ, ಭವಾನಿಶಂಕರ್ ಕಲ್ಮಡ್ಕ, ದಿನೇಶ್ ಸರಸ್ವತಿ ಮಹಲು, ಗ್ರಾಮ ಸಮಿತಿ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಉಪಸ್ತಿತರಿದ್ದರು.
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…