ಸುಳ್ಯ:ಮಹಾತ್ಮಾ ಗಾಂಧೀಜಿಯವರ 150 ನೇ ಜಯಂತಿ ಆಚರಣೆ ಕನಕ ಮಜಲು ಗ್ರಾಮ ಕಾಂಗ್ರೆಸ್ ಆಶ್ರಯದಲ್ಲಿ ಕನಕ ಮಜಲು ಶ್ರೀಮತಿ ಸೀತಮ್ಮ ನರಿಯೂರು ಇವರ ಮನೆಯಲ್ಲಿ ನಡೆಯಿತು. ಕನಕ ಮಜಲು ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಹೇಮಚಂದ್ರ ಕುತ್ಯಾಳ ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಗಾಂಧೀವಾದಿ ಕೊರಂಬಡ್ಕ ಮೋನಪ್ಪ ಗೌಡರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಅಧ್ಯಾಪಕರು ಕೇಪು ಸುಂದರ ಗೌಡ ನೆರವೇರಿಸಿದರು.
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಮಿತಿ ಸುಳ್ಯ ಇದರ ಅಧ್ಯಕ್ಷ ಎಸ್ ಎಂ ಬಾಪು ಸಾಹೇಬ್ ಹಾಗು ನಿವೃತ್ತ ಪ್ರಾಧ್ಯಾಪಕ ಸೀತಾರಾಮ ಬುಡ್ಲೆಗುತ್ತು ಗಾಂಧೀ ಸಂದೇಶ ನೀಡಿದರು. ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಹಾಗು ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕನಕ ಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಬೀರಾ ಮೊಯಿದೀನ್ ವಂದಿಸಿದರು. ವಿಜಯ ಕುಮಾರ ನರಿಯೂರು ಕಾರ್ಯಕ್ರಮ ನಿರೂಪಿಸಿದರು. ವಕೀಲ ಮಹಮ್ಮದ್ ಪವಾಜ್ , ನಂದರಾಜ್ ಸಂಕೇಶ, ಶಶಿಧರ ಎಂ ಜೆ, ಭವಾನಿಶಂಕರ್ ಕಲ್ಮಡ್ಕ, ದಿನೇಶ್ ಸರಸ್ವತಿ ಮಹಲು, ಗ್ರಾಮ ಸಮಿತಿ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಉಪಸ್ತಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…